ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ 
ದೇಶ

ಸೆಕ್ಸ್ ಸಿಡಿ ವಿವಾದ: ರಾಜಕೀಯ ಅಂಧತ್ವದಲ್ಲಿರುವ ಆಪ್ ಅಧಿಕಾರದ ದಾಹದಲ್ಲಿದೆ- ಕಾಂಗ್ರೆಸ್

ಸೆಕ್ಸ್ ಟೇಪ್ ಹಗರಣದಿಂದ ಸಾಕಷ್ಟು ವಿವಾದಕ್ಕೀಡಾಗಿರುವ ಆಮ್ ಆದ್ಮಿ ಪಕ್ಷವು ರಾಜಕೀಯ ಅಂಧತ್ವದಲ್ಲಿದ್ದು, ಅಧಿಕಾರದ ದಾಹದಲ್ಲಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ನವದೆಹಲಿ: ಸೆಕ್ಸ್ ಟೇಪ್ ಹಗರಣದಿಂದ ಸಾಕಷ್ಟು ವಿವಾದಕ್ಕೀಡಾಗಿರುವ ಆಮ್ ಆದ್ಮಿ ಪಕ್ಷವು ರಾಜಕೀಯ ಅಂಧತ್ವದಲ್ಲಿದ್ದು, ಅಧಿಕಾರದ ದಾಹದಲ್ಲಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು, ಆಮ್ ಆದ್ಮಿ ಪಕ್ಷ ತಾನು ಎಳೆದ ಬಲೆಗೆ ತಾನೇ ಸಿಲುಕಿಕೊಂಡಿದೆ. ಕೇಜ್ರಿವಾಲ್ ಅವರು ನೈತಿಕತೆಯನ್ನು ಮರೆತು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯವಾಗಿ ಅಂಧತ್ವದಲ್ಲಿರುವ ವ್ಯಕ್ತಿಗಳು ಅಧಿಕಾರದ ದಾಹದಲ್ಲಿರುತ್ತಾರೆ. ಇಂತಹ ವ್ಯಕ್ತಿಗಳು ಅಧಿಕಾರಕ್ಕೆ ಬಂದಾಗ ಈ ರೀತಿಯ ಘಟನೆಗಳು ನಡೆಯುವುದು ಸಾಮಾನ್ಯವಾಗುತ್ತದೆ ಎಂದು ಹೇಳಿದ್ದಾರೆ.

ಸೆಕ್ಸ್ ಟೇಪ್ ಹಗರಣ ಸಂಬಂಧಿಸಿದಂತೆ ಮಾಜಿ ಸಚಿವ ಸಂದೀಪ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದ ಆಪ್ ವಕ್ತಾರ ಅಶುತೋಷ್, ಸೆಕ್ಸ್ ಜೀವನದ ಒಂದು ಭಾಗ ವಾಗಿದೆ. ಪರಸ್ಪರ ಸಮ್ಮತಿಯಿಂದ ನಡೆದಿರುವ ಘಟನೆ ಇದಾಗಿದೆ. ಭಾರತೀಯ ಇತಿಹಾಸದಲ್ಲಿ ನಮ್ಮ ನಾಯಕರು, ಹೀರೋಗಳು ಸಾಮಾಜಿಕ ಚೌಕಟ್ಟನ್ನು ಮೀರಿ ಅವರಿಗೆ ಇಷ್ಟವಿದ್ದವರೊಂದಿಗೆ ಇದ್ದ ಉದಾಹರಣೆಗಳು ಸಾಕಷ್ಟಿವೆ.

ನೆಹರು ಹಾಗು ಎಡ್ವಿನಾ ಮೌಂಟ್ ಬ್ಯಾಟನ್ ಅವರ ಸಂಬಂಧದ ಬಗ್ಗೆ ಇಡೀ ವಿಶ್ವಕ್ಕೇ ಗೊತ್ತಿತ್ತು. ಅವರಿಬ್ಬರ ನಡುವಿನ ಪ್ರೀತಿ ನೆಹರು ಕೊನೆಯುಸಿರೆಳೆಯುವವರೆಗೂ ಇತ್ತು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿವಾಹವಾಗದೆ ಇದ್ದರು ತಾವು ಬ್ರಹ್ಮಚಾರಿಯಲ್ಲ ಎಂದು ಸಂಸತ್ ನಲ್ಲಿಯೇ ಹೇಳಿದ್ದರು. ಅವರು ತಮ್ಮ ಸ್ನೇಹಿತೆಯೊಂದಿಗೆ ಜೀವಿಸಿದ್ದರು ಸಮಾಜ ಅದನ್ನು ಆಕ್ಷೇಪಿಸಲಿಲ್ಲ. ಆದ್ದರಿಂದ ಸೆಕ್ಸ್ ಜೀವನದ ಭಾಗವಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT