ವರುಣ್ ಗಾಂಧಿ 
ದೇಶ

ನೆಹರು ಅವರನ್ನು ಹಾಡಿಹೊಗಳಿದ ಬಿಜೆಪಿ ಸಂಸದ ವರುಣ್ ಗಾಂಧಿ

ಭಾರತಕ್ಕಾಗಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಬಿಜಿಪಿ ಸಂಸದ ವರುಣ್ ಗಾಂಧಿ ಹೊಗಳಿದ್ದಾರೆ....

ಲಕ್ನೋ: ಭಾರತಕ್ಕಾಗಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ಬಿಜಿಪಿ ಸಂಸದ ವರುಣ್ ಗಾಂಧಿ ಹೊಗಳಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜವಹರ್ ಲಾಲ್ ನೆಹರು ಐಷಾರಾಮಿ ಜೀವನ ನಡೆಸುತ್ತಿದ್ದರೆಂಬ ಕಲ್ಪನೆ ಜನರಲ್ಲಿದೆ. ಆದರೆ, ಅವರು ಅದನ್ನು ಸಾಧಿಸಲು 15 ವರ್ಷಗಳ ಕಾಲ ಜೈಲಿನಲ್ಲಿರಬೇಕಾಯಿತು. ನೀನು 15 ವರ್ಷ ಜೈಲಲ್ಲಿರು, ನಂತರ ದೇಶದ ಪ್ರಧಾನಿ ಮಾಡುತ್ತೇವೆ ಎಂದರೆ ನಾನು ಅದನ್ನು ಒಪ್ಪಲು ತಯಾರಿಲ್ಲ. ಈ ಸ್ವಾತಂತ್ರ್ಯ ಯಾವುದೇ ಕಾರಣಕ್ಕೂ ದುರ್ಬಳಕೆ ಆಗಬಾರದು ಎಂದು ವರುಣ್ ಗಾಂಧಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಎಡದಲ್ಲಿ ನೆಹರು ಮತ್ತು ಚಿತ್ತರಂಜನ್ ದಾಸ್ ಪ್ರಮುಖವಾಗಿದ್ದರೆ, ಬಲದಲ್ಲಿ ಲಾಲಾ ಲಜಪತ್ ರಾಯ್ ಮುಂಚೂಣಿಯಲ್ಲಿದ್ದರು. ಅವರೆಲ್ಲರ ಸಿದ್ಧಾಂತಗಳು ವಿಭಿನ್ನವಾಗಿದ್ದವು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT