ಸೀತಾರಾಂ ಯೆಚುರಿ 
ದೇಶ

ಕಾಶ್ಮೀರಿ ಪ್ರತ್ಯೇಕವಾದಿಗಳ ಭೇಟಿಗೆ ಯತ್ನಿಸಿದ ಪ್ರತಿಪಕ್ಷ ಸಂಸದರಿಗೆ ಮುಖಭಂಗ

ಕಾಶ್ಮೀರಿ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಯತ್ನಿಸಿದ ಐವರು ಪ್ರತಿಪಕ್ಷ ಸಂಸದರನ್ನೊಳಗೊಂಡ ಸರ್ವಪಕ್ಷ ನಿಯೋಗಕ್ಕೆ ತೀವ್ರ...

ಶ್ರೀನಗರ: ಕಾಶ್ಮೀರಿ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಯತ್ನಿಸಿದ ಐವರು ಪ್ರತಿಪಕ್ಷ ಸಂಸದರನ್ನೊಳಗೊಂಡ ಸರ್ವಪಕ್ಷ ನಿಯೋಗಕ್ಕೆ ತೀವ್ರ ಮುಖಭಂಗವಾಗಿದ್ದು, ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಶಾಹ್ ಗೀಲಾನಿ ಪ್ರತಿಪಕ್ಷ ನಾಯಕರ ಭೇಟಿಗೂ ನಿರಾಕರಿಸಿದ್ದಾರೆ.
ಪ್ರತ್ಯೇಕವಾದಿಗಳು ಸರ್ವಪಕ್ಷ ನಿಯೋಗದೊಂದಿಗೆ ಮಾತುಕತೆ ನಿರಾಕರಿಸಿದ ನಂತರ ನಾಲ್ವರು ಸಂಸದರಾದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ, ಸಿಪಿಐ ನಾಯಕ ಡಿ ರಾಜಾ, ಜೆಡಿಯು ನಾಯಕ ಶರದ್ ಯಾದವ್ ಹಾಗೂ ಆರ್ ಜೆಡಿಯ ಜಯಪ್ರಕಾಶ್ ನಾರಾಯಣ್ ಅವರು ಪ್ರತ್ಯೇಕವಾಗಿ ಗೀಲಾನಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಆದರೆ ಕಳೆದ 60 ದಿನಗಳಿಂದ ಗೃಹ ಬಂಧನದಲ್ಲಿರುವ ಗಿಲಾನಿ ಪ್ರತಿಪಕ್ಷ ಸಂಸದರನ್ನು ಭೇಟಿ ಮಾಡಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
ಗೀಲಾನಿ ಅವರ ಮನೆ ಗೇಟ್ ಬಳಿಯೇ ಪ್ರತಿಪಕ್ಷ ಸಂಸದರನ್ನು ತಡೆದು, ಅವರ ವಿರುದ್ಧ ಘೋಷಣೆ ಕೂಗಲಾಯಿತು. ಈ ವೇಳೆ ಕಿಟಕಿಯಿಂದಲೇ ಸಂಸದರನ್ನು ನೋಡಿದ ಗೀಲಾನಿ. ಅವರನ್ನು ಭೇಟಿ ಮಾಡಲು ನಿರಾಕರಿಸಿದರು. 
ಈ ವೇಳೆ ಮಾತನಾಡಿದ ಶರದ್ ಯಾದವ್ ಅವರು, ಪ್ರತ್ಯೇಕವಾದಿಗಳು ನಮ್ಮನ್ನು ಭೇಟಿ ಮಾಡಲಿ, ಬಿಡಲಿ. ಆದರೆ ನಾವು ಎಲ್ಲರೊಂದಿಗೂ ಮಾತುಕತೆ ಸಿದ್ಧವಿದ್ದೇವೆ ಎಂಬುದನ್ನು ತೋರಿಸಲು ಯತ್ನಿಸಿದ್ದೇವೆ ಎಂದರು.
ಇದೇ ರೀತಿ ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲಿಕ್, ಹುರಿಯತ್ ಅಧ್ಯಕ್ಷ ಅಬ್ದುಲ್ ಘನಿ ಭಟ್ ಸಹ ಪ್ರತಿಪಕ್ಷ ಸಂಸದರೊಂದನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT