ಪ್ರತ್ಯೇಕತಾವಾದಿಗಳು 
ದೇಶ

ಸರ್ವಪಕ್ಷನಿಯೋಗದೊಂದಿಗಿನ ಮಾತುಕತೆಯನ್ನು ತಿರಸ್ಕರಿಸಿದ ಪ್ರತ್ಯೇಕತಾವಾದಿಗಳು

ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಶ್ರೀನಗರ: ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. 
ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರತ್ಯೇಕತಾವಾದಿಗಳು, ದೆಹಲಿಯಿಂದ ಬಂದಿರುವ ನಿಯೋಗ ಅದರ ಅಭಿಪ್ರಾಯದ ಬಗ್ಗೆ ಒಂದೇ ಒಂದು ಮಾತನ್ನೂ ಬಹಿರಂಗಪಡಿಸಿಲ್ಲ. ಅಲ್ಲದೇ ಭೇಟಿಯ ಕಾರ್ಯಸೂಚಿಯನ್ನು ಸ್ಪಷ್ಟಪಡಿಸಿಲ್ಲ ಎಂದು ಹೇಳಿದೆ. 
ಹೇಳಿಕೆಯಲ್ಲಿ ಮೆಹಬೂಬಾ ಮುಫ್ತಿ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತ್ಯೇಕತಾವಾದಿಗಳು, ಮೆಹಬೂಬಾ ಮುಫ್ತಿ ಅವರು ಪ್ರತ್ಯೇಕತಾವಾದಿಗಳನ್ನು ಮಾತುಕತೆಗೆ ಆಹ್ವಾನಿಸಿರುವುದು ಕೇವಲ ಪಿಡಿಪಿ ನಾಯಕಿಯಾಗಿಯಷ್ಟೇ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ಹೇಳಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗಾಗಿ ರಾಜನಾಥ್ ಸಿಂಗ್ ನೇತೃತ್ವದ ಸರ್ವಪಕ್ಷ ನಿಯೋಗ ಕಾಶ್ಮೀರದ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲು ಕಾಶ್ಮೀರಕ್ಕೆ ತೆರಳಿದ್ದು, ಪ್ರತ್ಯೇಕತಾವಾದಿಗಳನ್ನೂ ಒಳಗೊಂಡ ಮಾತುಕತೆ ನಡೆಸಬೇಕೆಂದು ಮೆಹಬೂಬಾ ಮುಫ್ತಿ ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ