ಪ್ರತ್ಯೇಕತಾವಾದಿಗಳು 
ದೇಶ

ಸರ್ವಪಕ್ಷನಿಯೋಗದೊಂದಿಗಿನ ಮಾತುಕತೆಯನ್ನು ತಿರಸ್ಕರಿಸಿದ ಪ್ರತ್ಯೇಕತಾವಾದಿಗಳು

ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಶ್ರೀನಗರ: ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. 
ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರತ್ಯೇಕತಾವಾದಿಗಳು, ದೆಹಲಿಯಿಂದ ಬಂದಿರುವ ನಿಯೋಗ ಅದರ ಅಭಿಪ್ರಾಯದ ಬಗ್ಗೆ ಒಂದೇ ಒಂದು ಮಾತನ್ನೂ ಬಹಿರಂಗಪಡಿಸಿಲ್ಲ. ಅಲ್ಲದೇ ಭೇಟಿಯ ಕಾರ್ಯಸೂಚಿಯನ್ನು ಸ್ಪಷ್ಟಪಡಿಸಿಲ್ಲ ಎಂದು ಹೇಳಿದೆ. 
ಹೇಳಿಕೆಯಲ್ಲಿ ಮೆಹಬೂಬಾ ಮುಫ್ತಿ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತ್ಯೇಕತಾವಾದಿಗಳು, ಮೆಹಬೂಬಾ ಮುಫ್ತಿ ಅವರು ಪ್ರತ್ಯೇಕತಾವಾದಿಗಳನ್ನು ಮಾತುಕತೆಗೆ ಆಹ್ವಾನಿಸಿರುವುದು ಕೇವಲ ಪಿಡಿಪಿ ನಾಯಕಿಯಾಗಿಯಷ್ಟೇ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ಹೇಳಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗಾಗಿ ರಾಜನಾಥ್ ಸಿಂಗ್ ನೇತೃತ್ವದ ಸರ್ವಪಕ್ಷ ನಿಯೋಗ ಕಾಶ್ಮೀರದ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲು ಕಾಶ್ಮೀರಕ್ಕೆ ತೆರಳಿದ್ದು, ಪ್ರತ್ಯೇಕತಾವಾದಿಗಳನ್ನೂ ಒಳಗೊಂಡ ಮಾತುಕತೆ ನಡೆಸಬೇಕೆಂದು ಮೆಹಬೂಬಾ ಮುಫ್ತಿ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT