ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್ (ಸಂಗ್ರಹ ಚಿತ್ರ) 
ದೇಶ

ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನ ಮಾಡುತ್ತೇವೆ: ಸೈಯಿದ್ ಸಲಹುದ್ದೀನ್ ಬೆದರಿಕೆ

ಕಾಶ್ಮೀರಿ ಆತ್ಮಾಹುತಿ ಬಾಂಬರ್ ಗಳ ಸಂಖ್ಯೆಗಳನ್ನು ಹೆಚ್ಚಿಸಿ ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ನಿರ್ಮಾಣ ಮಾಡುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ...

ಮುಜಾಫರ್'ಬಾದ್: ಕಾಶ್ಮೀರಿ ಆತ್ಮಾಹುತಿ ಬಾಂಬರ್ ಗಳ ಸಂಖ್ಯೆಗಳನ್ನು ಹೆಚ್ಚಿಸಿ ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ನಿರ್ಮಾಣ ಮಾಡುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್ ಶನಿವಾರ ಬೆದರಿಕೆ ಹಾಕಿದ್ದಾನೆ.

ಉಗ್ರ ಬುರ್ಹಾನಿ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ 50 ಕ್ಕೂ ಹೆಚ್ಚು ದಿನಗಳ ಕಾಲ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ವಿವಿಧ ವರ್ಗಗಳ ಜನರೊಂದಿಗೆ ಮಾತುಕತೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕಾಶ್ಮೀರದಲ್ಲಿ ಇಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್, ಕಾಶ್ಮೀರ ಸಮಸ್ಯೆಗೆ ಉಗ್ರವಾದವನ್ನು ಬಿಟ್ಟು ಬೇರಾವುದೇ ಪರಿಹಾರವಿಲ್ಲ. ಸಮಸ್ಯೆ ಬಗೆಹರಿಕೆಗೆ ಶಾಂತಿಯುತ ಹಾದಿಯಿಲ್ಲವೆಂಬುದು ಕಾಶ್ಮೀರಿ ನಾಯಕರಿಗೆ, ಅಲ್ಲಿನ ಜನರಿಗೆ ಹಾಗೂ ಮುಜಾಹಿದ್ದಾನ್ ಸಂಘಟನೆಗಳಿಗೆ ತಿಳಿದಿರುವ ವಿಚಾರವಾಗಿದೆ ಎಂದು ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾನೆ.

ಬುರ್ಹಾನಿ ವಾನಿ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಭಾರತೀಯ ಸೇನೆ ತನ್ನ ಬಲವನ್ನು ಹೆಚ್ಚಿಸಿದಷ್ಟೂ ಪ್ರತ್ಯೇಕತಾವಾದಿಗಳ ಹಾಗೂ ಸ್ವಾತಂತ್ರ್ಯೋ ಹೋರಾಟಗಾರರ (ಭಯೋತ್ಪಾದಕರ) ಬಲ ಹೆಚ್ಚಾಗುತ್ತಾ ಹೋಗುತ್ತದೆ. ಕಾಶ್ಮೀರ ವಿವಾದವನ್ನು ಭಾರತ ಸಮಸ್ಯೆಯೆಂದು ಪರಿಗಣಿಸದೆಯೇ ಮಾತುಕತೆ ನಡೆಸಿದರೆ ಇದರಿಂದ ಪ್ರಯೋಜನವೇನಿದೆ.

ಭಾರತೀಯ ಸೇನೆ ತನ್ನ ಶಕ್ತಿಯನ್ನು ಪದರ್ಶನ ಮಾಡಿದಷ್ಟು, ನಮ್ಮ ಶಕ್ತಿ ಹೆಚ್ಚುತ್ತಾ ಹೋಗುತ್ತದೆ. ನಮ್ಮ ಶಕ್ತಿಯನ್ನು ಶೀಘ್ರದಲ್ಲೇ ತೋರಿಸುತ್ತೇವೆ. ಕಾಶ್ಮೀರದಲ್ಲಿ ಮತ್ತೆ ಸಮಸ್ಯೆಗಳು ಉಂಟಾಗುವುದಿಲ್ಲ. ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ಮಾರ್ಪಡಿಸುತ್ತೇವೆ. ಶೀಘ್ರದಲ್ಲೇ ಕಾಶ್ಮೀರವನ್ನು ನಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತೇವೆಂದು ಎಚ್ಚರಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT