ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್ (ಸಂಗ್ರಹ ಚಿತ್ರ) 
ದೇಶ

ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನ ಮಾಡುತ್ತೇವೆ: ಸೈಯಿದ್ ಸಲಹುದ್ದೀನ್ ಬೆದರಿಕೆ

ಕಾಶ್ಮೀರಿ ಆತ್ಮಾಹುತಿ ಬಾಂಬರ್ ಗಳ ಸಂಖ್ಯೆಗಳನ್ನು ಹೆಚ್ಚಿಸಿ ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ನಿರ್ಮಾಣ ಮಾಡುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ...

ಮುಜಾಫರ್'ಬಾದ್: ಕಾಶ್ಮೀರಿ ಆತ್ಮಾಹುತಿ ಬಾಂಬರ್ ಗಳ ಸಂಖ್ಯೆಗಳನ್ನು ಹೆಚ್ಚಿಸಿ ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ನಿರ್ಮಾಣ ಮಾಡುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್ ಶನಿವಾರ ಬೆದರಿಕೆ ಹಾಕಿದ್ದಾನೆ.

ಉಗ್ರ ಬುರ್ಹಾನಿ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ 50 ಕ್ಕೂ ಹೆಚ್ಚು ದಿನಗಳ ಕಾಲ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ವಿವಿಧ ವರ್ಗಗಳ ಜನರೊಂದಿಗೆ ಮಾತುಕತೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕಾಶ್ಮೀರದಲ್ಲಿ ಇಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯಿದ್ ಸಲಹುದ್ದೀನ್, ಕಾಶ್ಮೀರ ಸಮಸ್ಯೆಗೆ ಉಗ್ರವಾದವನ್ನು ಬಿಟ್ಟು ಬೇರಾವುದೇ ಪರಿಹಾರವಿಲ್ಲ. ಸಮಸ್ಯೆ ಬಗೆಹರಿಕೆಗೆ ಶಾಂತಿಯುತ ಹಾದಿಯಿಲ್ಲವೆಂಬುದು ಕಾಶ್ಮೀರಿ ನಾಯಕರಿಗೆ, ಅಲ್ಲಿನ ಜನರಿಗೆ ಹಾಗೂ ಮುಜಾಹಿದ್ದಾನ್ ಸಂಘಟನೆಗಳಿಗೆ ತಿಳಿದಿರುವ ವಿಚಾರವಾಗಿದೆ ಎಂದು ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾನೆ.

ಬುರ್ಹಾನಿ ವಾನಿ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಭಾರತೀಯ ಸೇನೆ ತನ್ನ ಬಲವನ್ನು ಹೆಚ್ಚಿಸಿದಷ್ಟೂ ಪ್ರತ್ಯೇಕತಾವಾದಿಗಳ ಹಾಗೂ ಸ್ವಾತಂತ್ರ್ಯೋ ಹೋರಾಟಗಾರರ (ಭಯೋತ್ಪಾದಕರ) ಬಲ ಹೆಚ್ಚಾಗುತ್ತಾ ಹೋಗುತ್ತದೆ. ಕಾಶ್ಮೀರ ವಿವಾದವನ್ನು ಭಾರತ ಸಮಸ್ಯೆಯೆಂದು ಪರಿಗಣಿಸದೆಯೇ ಮಾತುಕತೆ ನಡೆಸಿದರೆ ಇದರಿಂದ ಪ್ರಯೋಜನವೇನಿದೆ.

ಭಾರತೀಯ ಸೇನೆ ತನ್ನ ಶಕ್ತಿಯನ್ನು ಪದರ್ಶನ ಮಾಡಿದಷ್ಟು, ನಮ್ಮ ಶಕ್ತಿ ಹೆಚ್ಚುತ್ತಾ ಹೋಗುತ್ತದೆ. ನಮ್ಮ ಶಕ್ತಿಯನ್ನು ಶೀಘ್ರದಲ್ಲೇ ತೋರಿಸುತ್ತೇವೆ. ಕಾಶ್ಮೀರದಲ್ಲಿ ಮತ್ತೆ ಸಮಸ್ಯೆಗಳು ಉಂಟಾಗುವುದಿಲ್ಲ. ಭಾರತೀಯ ಸೇನೆ ಪಾಲಿಗೆ ಕಾಶ್ಮೀರವನ್ನು ಸ್ಮಶಾನವಾಗಿ ಮಾರ್ಪಡಿಸುತ್ತೇವೆ. ಶೀಘ್ರದಲ್ಲೇ ಕಾಶ್ಮೀರವನ್ನು ನಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತೇವೆಂದು ಎಚ್ಚರಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT