2013 ರಲ್ಲಿ ಕೊಲೆಯಾದ ವಿಚಾರವಾದಿ ನರೇಂದ್ರ ದಭೋಲ್ಕರ್ 
ದೇಶ

ದಭೋಲ್ಕರ್ ಕೊಲೆ: ವೀರೇಂದ್ರಸಿಂಗ್ ತಾವ್ಡೆ ವಿರುದ್ಧ ಕೊಲೆ ಆರೋಪ ಪ್ರಕರಣ ದಾಖಲಿಸಿದ ಸಿಬಿಐ

2013 ರಲ್ಲಿ ನಡೆದ ವಿಚಾರವಾದಿ ನರೇಂದ್ರ ದಭೋಲ್ಕರ್ ಕೊಲೆ ಸಂಬಂಧವಾಗಿ ಸಿಬಿಐ, ಹಿಂದೂ ಜಾಗರಣ ಸಮಿತಿ ಸದಸ್ಯ ವೀರೇಂದ್ರಸಿಂಗ್ ತಾವ್ಡೆ ವಿರುದ್ಧ ಅಪರಾಧ ಷಡ್ಯಂತ್ರ ಮತ್ತು ಕೊಲೆ ಪ್ರಕರಣ ದಾಖಲಿಸಿದೆ.

ನವದೆಹಲಿ: 2013 ರಲ್ಲಿ ನಡೆದ ವಿಚಾರವಾದಿ ನರೇಂದ್ರ ದಭೋಲ್ಕರ್ ಕೊಲೆ ಸಂಬಂಧವಾಗಿ ಸಿಬಿಐ, ಹಿಂದೂ ಜಾಗರಣ ಸಮಿತಿ ಸದಸ್ಯ ವೀರೇಂದ್ರಸಿಂಗ್ ತಾವ್ಡೆ ವಿರುದ್ಧ ಅಪರಾಧ ಷಡ್ಯಂತ್ರ ಮತ್ತು ಕೊಲೆ ಪ್ರಕರಣ ದಾಖಲಿಸಿದೆ. 
ಮತ್ತೊಬ್ಬ ವಿಚಾರವಾದಿ ಮತ್ತು ಬರಹಗಾರ ಗೋವಿಂದ ಪನ್ಸಾರೆ ಅವರು ಫೆಬ್ರವರಿ 2015 ರಲ್ಲಿ ಕೊಲೆಯಾದಾಗಲಿಂದಲೂ ಪರಿವೀಕ್ಷಣೆಯಲ್ಲಿರುವ ಮತ್ತೊಂದು ಹಿಂದೂ ಸಂಸ್ಥೆ ಸನಾತನ ಸಂಸ್ಥಾ ಜೊತೆಗೆ ಹಿಂದೂ ಜಾಗರಣ ಸಮಿತಿಗೆ ಸಂಬಂಧವಿದೆ ಎಂದು ಕೂಡ ತಿಳಿಯಲಾಗಿದೆ. 
ಸೆಕ್ಷನ್ 120-ಬಿ (ಅಪರಾಧ ಷಡ್ಯಂತ್ರ) ಮತ್ತು ಸೆಕ್ಷನ್ 302 (ಕೊಲೆ) ಅಡಿಯಲ್ಲಿ ತಾವ್ಡೆ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ. 
ಮೂಢ ನಂಭಿಕೆ ವಿರೋಧಿ ಕಾರ್ಯಕರ್ತ ದಭೋಲ್ಕರ್ ಅವರನ್ನು ಹಾಡುಹಗಲೇ ಆಗಸ್ಟ್ 20 2103 ರಲ್ಲಿ ಕೊಲ್ಲಲಾಗಿತ್ತು. ಮೇ 2014 ರಲ್ಲಿ ಬಾಂಬೆ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು ಮತ್ತು ಈ ವರ್ಷ ಜೂನ್ ನಲ್ಲಿ ತಾವ್ಡೆಯನ್ನು ಸಿಬಿಐ ಬಂಧಿಸಿತ್ತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

‘ಸರ್ಕಾರ ನಮ್ಮದು…’: BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು