ಅಬ್ದುಲ್ ಬಸಿತ್ 
ದೇಶ

ಪಾಕ್ ನಲ್ಲಿ ಭಾರತೀಯ ರಾಯಭಾರಿಗೆ ಅಗೌರವ: ಪಾಕ್ ಹೈ ಕಮಿಷನರ್ ಗೆ ಸಮನ್ಸ್

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ಭಾರತದಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಗೆ ಸಮನ್ಸ್ ನೀಡಿದೆ.

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ಭಾರತದಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಗೆ ಸಮನ್ಸ್ ನೀಡಿದೆ.

"ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಅವರನ್ನು ವಿದೇಶಾಂಗ ಇಲಾಖೆಗೆ ಬರುವಂತೆ ಸಮನ್ಸ್ ನೀಡಲಾಗಿತ್ತು. ಭಾರತದ ವಿದೇಶಾಂಗ ಇಲಾಖೆಯ ( ಪಶ್ಚಿಮ) ಕಾರ್ಯದರ್ಶಿ ಸುಜಾತಾ ಮೆಹ್ತಾ, ಅಬ್ದುಲ್ ಬಸಿತ್ ಅವರೊಂದಿಗೆ ಪಾಕಿಸ್ತಾನದಲ್ಲಿ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಚರ್ಚಿಸಿದ್ದು ಘಟನೆ ಬಗ್ಗೆ ಪ್ರತಿಭಟಿಸಿದ್ದಾರೆ" ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ. 
ಪಾಕಿಸ್ತಾನದಲ್ಲಿರುವ ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರನ್ನು ಕರಾಚಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿತ್ತು. ಆದರೆ ಪಾಕಿಸ್ತಾನ ಕಾಶ್ಮೀರದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗೌತಮ್ ಬಾಂಬಾವಲೆ ಹೇಳಿಕೆ ನೀಡಿದ ಬೆನ್ನಲ್ಲೇ ಯಾವುದೇ ಕಾರಣ ನೀಡದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ರದ್ದುಗೊಳಿಸಲಾಗಿದೆ. ಈ ಘಟನೆಯಿಂದ ಭಾರತೀಯ ರಾಯಭಾರಿಗೆ ಅವಮಾನ ಉಂಟಾಗಿದ್ದು, ಭಾರತ ಸರ್ಕಾರ ಪಾಕಿಸ್ತಾನ ಹೈಕಮಿಷನರ್ ಬಳಿ ಈ ಬಗ್ಗೆ ಚರ್ಚೆ ನಡೆಸಿದ್ದು, ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಸೂಕ್ತ ವಾತಾವರಣ ಕಲ್ಪಿಸಬೇಕೆಂದು ವಿದೇಶಾಂಗ ಇಲಾಖೆ ಅಬ್ದುಲ್ ಬಸಿತ್ ಗೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT