ಅಬ್ದುಲ್ ಬಸಿತ್ 
ದೇಶ

ಪಾಕ್ ನಲ್ಲಿ ಭಾರತೀಯ ರಾಯಭಾರಿಗೆ ಅಗೌರವ: ಪಾಕ್ ಹೈ ಕಮಿಷನರ್ ಗೆ ಸಮನ್ಸ್

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ಭಾರತದಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಗೆ ಸಮನ್ಸ್ ನೀಡಿದೆ.

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ಭಾರತದಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಗೆ ಸಮನ್ಸ್ ನೀಡಿದೆ.

"ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಅವರನ್ನು ವಿದೇಶಾಂಗ ಇಲಾಖೆಗೆ ಬರುವಂತೆ ಸಮನ್ಸ್ ನೀಡಲಾಗಿತ್ತು. ಭಾರತದ ವಿದೇಶಾಂಗ ಇಲಾಖೆಯ ( ಪಶ್ಚಿಮ) ಕಾರ್ಯದರ್ಶಿ ಸುಜಾತಾ ಮೆಹ್ತಾ, ಅಬ್ದುಲ್ ಬಸಿತ್ ಅವರೊಂದಿಗೆ ಪಾಕಿಸ್ತಾನದಲ್ಲಿ ಭಾರತೀಯ ರಾಯಭಾರಿಗೆ ಅಗೌರವ ತೋರಿರುವ ಪ್ರಕರಣವನ್ನು ಚರ್ಚಿಸಿದ್ದು ಘಟನೆ ಬಗ್ಗೆ ಪ್ರತಿಭಟಿಸಿದ್ದಾರೆ" ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ. 
ಪಾಕಿಸ್ತಾನದಲ್ಲಿರುವ ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರನ್ನು ಕರಾಚಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿತ್ತು. ಆದರೆ ಪಾಕಿಸ್ತಾನ ಕಾಶ್ಮೀರದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗೌತಮ್ ಬಾಂಬಾವಲೆ ಹೇಳಿಕೆ ನೀಡಿದ ಬೆನ್ನಲ್ಲೇ ಯಾವುದೇ ಕಾರಣ ನೀಡದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ರದ್ದುಗೊಳಿಸಲಾಗಿದೆ. ಈ ಘಟನೆಯಿಂದ ಭಾರತೀಯ ರಾಯಭಾರಿಗೆ ಅವಮಾನ ಉಂಟಾಗಿದ್ದು, ಭಾರತ ಸರ್ಕಾರ ಪಾಕಿಸ್ತಾನ ಹೈಕಮಿಷನರ್ ಬಳಿ ಈ ಬಗ್ಗೆ ಚರ್ಚೆ ನಡೆಸಿದ್ದು, ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಸೂಕ್ತ ವಾತಾವರಣ ಕಲ್ಪಿಸಬೇಕೆಂದು ವಿದೇಶಾಂಗ ಇಲಾಖೆ ಅಬ್ದುಲ್ ಬಸಿತ್ ಗೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT