ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿರುವ ಮುಸ್ಲಿಂ ಧಾರ್ಮಿಕ ಮುಖಂಡರು 
ದೇಶ

'ಪಾಕಿಸ್ತಾನ್ ಜಿಂದಾಬಾದ್' ಕೂಗುವ ಪ್ರತ್ಯೇಕತಾವಾದಿಗಳ ಭೇಟಿ ಅಗತ್ಯವಿಲ್ಲ: ಮುಸ್ಲಿಂ ಧಾರ್ಮಿಕ ಮುಖಂಡರು

'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗುತ್ತಿರುವ ಪ್ರತ್ಯೇಕತಾವಾದಿಗಳನ್ನು ಭೇಟಿಯಾಗುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಸ್ಲಿಂ ಧಾರ್ಮಿಕ...

ನವದೆಹಲಿ: 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗುತ್ತಿರುವ ಪ್ರತ್ಯೇಕತಾವಾದಿಗಳನ್ನು ಭೇಟಿಯಾಗುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಸ್ಲಿಂ ಧಾರ್ಮಿಕ ಮುಖಂಡರು ಮಂಗಳವಾರ ಹೇಳಿದ್ದಾರೆ.

ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಸ್ಲಿಂ ಧಾರ್ಮಿಕ ಮುಖಂಡರು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಭೇಟಿ ನಂತರ ಗೃಹ ಸಚಿವರೊಂದಿಗಿನ ಮಾತುಕತೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಮುಖಂಡರು, ಗೃಹ ಸಚಿವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ರಾಜನಾಥ ಸಿಂಗ್ ಅವರೊಂದಿಗಿನ ಮಾತುಕತೆ ಉತ್ತಮವಾಗಿತ್ತು. ಕಾಶ್ಮೀರ ಹಿಂಸಾಚಾರ ಕುರಿತಂತೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಕಾಶ್ಮೀರ ಸಮಸ್ಯೆಯನ್ನು ನಮ್ಮ ಗೃಹ ಸಚಿವರು ಬಗೆಹರಿಸಲಿದ್ದಾರೆಂಬ ವಿಶ್ವಾಸ ನಮಗಿದೆ. ಕೆಲ ಜನರು ಪ್ರತ್ಯೇಕತಾವಾದಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡುವ ಅಗತ್ಯವಿರಲಿಲ್ಲ. ರಾಜನಾಥ ಸಿಂಗ್ ಅವರ ನಿರ್ದೇಶನವನ್ನು ಪಾಲಿಸಬೇಕು ಎಂದು ಮೌಲಾನಾ ಅನ್ಸಾರ್ ರಾಜಾ ಅವರು ಹೇಳಿದ್ದಾರೆ.

ಹುರಿಯತ್ ಜೊತೆಗೆ ಮಾತುಕತೆ ನಡೆಸಲು ನಾಯಕರು ಯತ್ನ ನಡೆಸಿದ್ದಾರೆ. 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗುವಂತಹ ಜನರ ಮಾತುಕತೆ ಏಕೆ ನಡೆಸಬೇಕು. ಮಾತುಕತೆ ಏನಿದ್ದರೂ 'ಹಿಂದೂಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗುವ ಜನರೊಂದಿಗೆ ಮಾಡಬೇಕು. ಕಾಶ್ಮೀರದಲ್ಲಿ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಬೇಕು. ಸಭೆಯಲ್ಲಿ ಎಲ್ಲಾ ದರ್ಗಾಗಳ ಇಮಾಮ್ ಗಳು ಸಭೆಯಲ್ಲಿ ಭಾಗಿಯಾಗಿ ಸೂಫಿ ಮಸೂದೆ ಬಗ್ಗೆ ಮಾತನಾಡಬೇಕು. ನಂತರ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಮುಂದೆ ಕೂಡ ಭಾರತದ ಅವಿಭಾಜ್ಯವಾಗಿಯೇ ಇರುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT