ಅರವಿಂದ್ ಕೇಜ್ರಿವಾಲ್-ಅಮನ್ ದೀಪ್ ಕೌರ್ 
ದೇಶ

ಆಪ್ ನಾಯಕರು 52 ಕಾರ್ಯಕರ್ತೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ: ಅಮನ್‌ದೀಪ್ ಕೌರ್

ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಗೆ ಮುಜುಗರ ತರಿಸುವ ಮತ್ತೊಂದು ಗಂಭೀರ ಆರೋಪ ಆಪ್ ನಾಯಕರ ಮೇಲೆ ಬಂದಿದೆ...

ಪಂಜಾಬ್: ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಗೆ ಮುಜುಗರ ತರಿಸುವ ಮತ್ತೊಂದು ಗಂಭೀರ ಆರೋಪ ಆಪ್ ನಾಯಕರ ಮೇಲೆ ಬಂದಿದೆ. 
ದೆಹಲಿಯ 52 ಆಪ್ ಮಹಿಳಾ ಕಾರ್ಯಕರ್ತರ ಮೇಲೆ ಪಕ್ಷದ ನಾಯಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆಪ್ ಪಕ್ಷದ ಪಂಜಾಬ್ ನ ಫಿರೋಜ್ಪುರ ಘಟಕ ಮತ್ತು ರಾಜ್ಯ ಸಮಿತಿಯ ಮಾಜಿ ಸದಸ್ಯೆ ಅಮನ್ ದೀಪ್ ಕೌರ್ ಆರೋಪ ಮಾಡಿದ್ದಾರೆ. 
ಆಪ್ ಮಹಿಳಾ ಸುರಕ್ಷತೆಯ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದೆ. ಆದರೆ ಪಕ್ಷದೊಳಗಿರುವ ಮಹಿಳೆಯರಿಗೇ ರಕ್ಷಣೆಯಿಲ್ಲ ಎಂದು ಅಮನ್ ದೀಪ್ ಟೀಕಿಸಿದ್ದಾರೆ. 
ಪಕ್ಷದಲ್ಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಮಾಹಿತಿ ನೀಡಿದ್ದೆ. ಆಪ್ ನಾಯಕರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ 52 ಕಾರ್ಯಕರ್ತೆಯರ ಪೈಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಇನ್ನುಳಿಂದ 51 ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. 
ಆಪ್ ಮಾಜಿ ಶಾಸಕ ಸಂದೀಪ್ ಕುಮಾರ್ ಸಿಡಿ ಪ್ರಕರಣದಿಂದ ಮುಜುಗರಕ್ಕೊಳಗಾಗಿದ್ದ ಆಪ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಬಂದಿದೆ. ಪಂಜಾಬ್ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಪಕ್ಷಕ್ಕೆ ಲೈಂಗಿಕ ಹಗರಣ ಸುತ್ತಿಕೊಳ್ಳುತ್ತಿರುವುದು ಅರವಿಂದ್ ಕೇಜ್ರಿವಾಲ್ ಗೆ ತಲೆನೋವಾಗಿ ಪರಿಣಮಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT