ಅರವಿಂದ್ ಕೇಜ್ರಿವಾಲ್ 
ದೇಶ

ಬಿಜೆಪಿ ಕಾರ್ಯಕರ್ತೆಯರಿಂದ ದೆಹಲಿ ಸಿಎಂ ಕೇಜ್ರಿವಾಲ್‍ಗೆ ಮುತ್ತಿಗೆ

ಪಂಜಾಬ್‍ಗೆ ಹೊರಟಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಗುರುವಾರ ದೆಹಲಿಯ ರೇಲ್ವೆ ನಿಲ್ದಾಣದಲ್ಲಿ...

ನವದೆಹಲಿ: ಪಂಜಾಬ್‍ಗೆ ಹೊರಟಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಗುರುವಾರ ದೆಹಲಿಯ ರೇಲ್ವೆ ನಿಲ್ದಾಣದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ಘಟನೆ ಗುರುವಾರ ನಡೆಯಿತು.

ಆಮ್ ಆದ್ಮಿ ಪಕ್ಷದ ಉಚ್ಚಾಟಿತ ಶಾಸಕ ಸಂದೀಪ್ ಕುಮಾರ್ ಅವರ ಬಗ್ಗೆ ಕೇಜ್ರಿವಾಲ್ ಅವರ ಮೌನವನ್ನು ಪ್ರಶ್ನಿಸಿ ದೆಹಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಜೀತ್ ಸೆಹ್ರಾವತ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತೆಯರು ದೆಹಲಿ ಸಿಎಂ ವಿರುದ್ಧ ಇಂದು ಪ್ರತಿಭಟಿಸಿದರು. ಆದರೆ ಪೊಲೀಸರ ಭದ್ರತಾ ಲೋಪದಿಂದಾಗಿ ಮಹಿಳಾ ಕಾರ್ಯಕರ್ತರು ಕೇಜ್ರಿವಾಲ್ ಅವರನ್ನು ಸುತ್ತುವರಿದು, ಮುತ್ತಿಗೆ ಹಾಕಿದರು.

ಬಿಜೆಪಿ ಕಾರ್ಯಕರ್ತೆಯರು ಕೇಜ್ರಿವಾಲ್ ಅವರನ್ನು ಮುತ್ತಿಗೆ ಹಾಕಿ ಬೈಯುತ್ತಿರುವಾಗ ದೆಹಲಿ ಪೊಲೀಸರು ಅಸಹಾಯಕರಾಗಿ ನಿಂತಿದ್ದರು,  ದೆಹಲಿ ಪೊಲೀಸರ ಕರ್ತವ್ಯ ಲೋಪದ ಬಗ್ಗೆ ಕಿಡಿ ಕಾರಿದ ಆಪ್ ನಾಯಕ ಸಂಜಯ್ ಸಿಂಗ್  ಇದೇ ಕಾರ್ಯಕರ್ತೆಯರು ಮಾಜಿ ಕೇಂದ್ರ ಸಚಿವ ನಿಹಾಲ್ ಚಂದ್ ಮತ್ತು ಬಾಬು ಲಾಲ್ ಅವರನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಟ್ವೀಟ್ ಮಾಡಿದ್ದಾರೆ .

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT