ಅರವಿಂದ್ ಕೇಜ್ರಿವಾಲ್ 
ದೇಶ

ಬಿಜೆಪಿ ಕಾರ್ಯಕರ್ತೆಯರಿಂದ ದೆಹಲಿ ಸಿಎಂ ಕೇಜ್ರಿವಾಲ್‍ಗೆ ಮುತ್ತಿಗೆ

ಪಂಜಾಬ್‍ಗೆ ಹೊರಟಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಗುರುವಾರ ದೆಹಲಿಯ ರೇಲ್ವೆ ನಿಲ್ದಾಣದಲ್ಲಿ...

ನವದೆಹಲಿ: ಪಂಜಾಬ್‍ಗೆ ಹೊರಟಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಗುರುವಾರ ದೆಹಲಿಯ ರೇಲ್ವೆ ನಿಲ್ದಾಣದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ಘಟನೆ ಗುರುವಾರ ನಡೆಯಿತು.

ಆಮ್ ಆದ್ಮಿ ಪಕ್ಷದ ಉಚ್ಚಾಟಿತ ಶಾಸಕ ಸಂದೀಪ್ ಕುಮಾರ್ ಅವರ ಬಗ್ಗೆ ಕೇಜ್ರಿವಾಲ್ ಅವರ ಮೌನವನ್ನು ಪ್ರಶ್ನಿಸಿ ದೆಹಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಜೀತ್ ಸೆಹ್ರಾವತ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತೆಯರು ದೆಹಲಿ ಸಿಎಂ ವಿರುದ್ಧ ಇಂದು ಪ್ರತಿಭಟಿಸಿದರು. ಆದರೆ ಪೊಲೀಸರ ಭದ್ರತಾ ಲೋಪದಿಂದಾಗಿ ಮಹಿಳಾ ಕಾರ್ಯಕರ್ತರು ಕೇಜ್ರಿವಾಲ್ ಅವರನ್ನು ಸುತ್ತುವರಿದು, ಮುತ್ತಿಗೆ ಹಾಕಿದರು.

ಬಿಜೆಪಿ ಕಾರ್ಯಕರ್ತೆಯರು ಕೇಜ್ರಿವಾಲ್ ಅವರನ್ನು ಮುತ್ತಿಗೆ ಹಾಕಿ ಬೈಯುತ್ತಿರುವಾಗ ದೆಹಲಿ ಪೊಲೀಸರು ಅಸಹಾಯಕರಾಗಿ ನಿಂತಿದ್ದರು,  ದೆಹಲಿ ಪೊಲೀಸರ ಕರ್ತವ್ಯ ಲೋಪದ ಬಗ್ಗೆ ಕಿಡಿ ಕಾರಿದ ಆಪ್ ನಾಯಕ ಸಂಜಯ್ ಸಿಂಗ್  ಇದೇ ಕಾರ್ಯಕರ್ತೆಯರು ಮಾಜಿ ಕೇಂದ್ರ ಸಚಿವ ನಿಹಾಲ್ ಚಂದ್ ಮತ್ತು ಬಾಬು ಲಾಲ್ ಅವರನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಟ್ವೀಟ್ ಮಾಡಿದ್ದಾರೆ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT