ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ 
ದೇಶ

ಪ್ರವಾಹದ ವೇಳೆ ಕನ್ನಡಿಗರ ನೆರವು ಮರೆಯದಿರಿ: ತಮಿಳುನಾಡಿಗೆ ನಟಿ ನಗ್ಮಾ

ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ...

ಚೆನ್ನೈ: ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ನಟಿ ನಗ್ಮಾ, ಚೆನ್ನೈನಲ್ಲಿ ಇತ್ತೀಚೆಗಷ್ಟೇ ದೊಡ್ಡ ಪ್ರವಾಹ ಬಂದಿತ್ತು. ಪ್ರವಾಹ ಸಮಸ್ಯೆಗೆ ತಮಿಳುನಾಡಿಗೆ ದೊಡ್ಡ ಸಮಸ್ಯೆಯಾಗಿ ತಲೆದೋರಿತ್ತು. ಸಂಕಷ್ಟದಲ್ಲಿದ್ದ ಸಮಯದಲ್ಲಿ ಯಾರು ನೆರವಿಗೆ ಬಂದರು ಎಂಬುದನ್ನು ನೆನೆಯಬೇಕಿದೆ. ಸಂಕಷ್ಟದಲ್ಲಿದ್ದ ಜನತೆಗೆ ಕರ್ನಾಟಕ ಸಾಕಷ್ಟು ನೆರವು ನೀಡಿದೆ. ಇದನ್ನು ಎಂದಿರೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಕಾವೇರಿ ನೀರಿನ ಸಮಸ್ಯೆ ಎದುರಾಗಿದೆ. ವಿವಾದ ಕುರಿತಂತೆ ಮಾತನಾಡಿದಷ್ಟು ಸುಲಭವಾಗಿ ಸಮಸ್ಯೆ ಬಗೆಹರಿಯುವುದಿಲ್ಲ. ಕರ್ನಾಟಕದವರು ನಮಗೆ ದ್ರೋಹ ಮಾಡುವುದಿಲ್ಲ. ಸಮಸ್ಯೆಯಿರುವುದರಿಂದ ಅವರು ನೀರು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ಕಾವೇರಿ ನೀರಿಗಿಂತ ದೇಶದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ರೈತರು ಇಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಮುಂದೆ ಕಾವೇರಿ ವಿಚಾರ ದೊಡ್ಡ ವಿಚಾರವೇನಲ್ಲ. ಹೀಗಾಗಿ ವಿವಾದ ಕುರಿತಂತೆ ಬಹಳ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT