ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ 
ದೇಶ

ಪ್ರವಾಹದ ವೇಳೆ ಕನ್ನಡಿಗರ ನೆರವು ಮರೆಯದಿರಿ: ತಮಿಳುನಾಡಿಗೆ ನಟಿ ನಗ್ಮಾ

ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ...

ಚೆನ್ನೈ: ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ನಟಿ ನಗ್ಮಾ, ಚೆನ್ನೈನಲ್ಲಿ ಇತ್ತೀಚೆಗಷ್ಟೇ ದೊಡ್ಡ ಪ್ರವಾಹ ಬಂದಿತ್ತು. ಪ್ರವಾಹ ಸಮಸ್ಯೆಗೆ ತಮಿಳುನಾಡಿಗೆ ದೊಡ್ಡ ಸಮಸ್ಯೆಯಾಗಿ ತಲೆದೋರಿತ್ತು. ಸಂಕಷ್ಟದಲ್ಲಿದ್ದ ಸಮಯದಲ್ಲಿ ಯಾರು ನೆರವಿಗೆ ಬಂದರು ಎಂಬುದನ್ನು ನೆನೆಯಬೇಕಿದೆ. ಸಂಕಷ್ಟದಲ್ಲಿದ್ದ ಜನತೆಗೆ ಕರ್ನಾಟಕ ಸಾಕಷ್ಟು ನೆರವು ನೀಡಿದೆ. ಇದನ್ನು ಎಂದಿರೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಕಾವೇರಿ ನೀರಿನ ಸಮಸ್ಯೆ ಎದುರಾಗಿದೆ. ವಿವಾದ ಕುರಿತಂತೆ ಮಾತನಾಡಿದಷ್ಟು ಸುಲಭವಾಗಿ ಸಮಸ್ಯೆ ಬಗೆಹರಿಯುವುದಿಲ್ಲ. ಕರ್ನಾಟಕದವರು ನಮಗೆ ದ್ರೋಹ ಮಾಡುವುದಿಲ್ಲ. ಸಮಸ್ಯೆಯಿರುವುದರಿಂದ ಅವರು ನೀರು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ಕಾವೇರಿ ನೀರಿಗಿಂತ ದೇಶದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ರೈತರು ಇಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಮುಂದೆ ಕಾವೇರಿ ವಿಚಾರ ದೊಡ್ಡ ವಿಚಾರವೇನಲ್ಲ. ಹೀಗಾಗಿ ವಿವಾದ ಕುರಿತಂತೆ ಬಹಳ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT