ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ 
ದೇಶ

ಪ್ರವಾಹದ ವೇಳೆ ಕನ್ನಡಿಗರ ನೆರವು ಮರೆಯದಿರಿ: ತಮಿಳುನಾಡಿಗೆ ನಟಿ ನಗ್ಮಾ

ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ...

ಚೆನ್ನೈ: ಪ್ರವಾಹದ ಸಂಕಷ್ಟದಲ್ಲಿ ನರಳುತ್ತಿದ್ದ ವೇಳೆ ಸಹಾಯಕ್ಕೆ ಬಂದ ಕರ್ನಾಟಕ ನೆರವು ಎಂದಿಗೂ ಮರೆಯದಿರಿ ಎಂದು ನಟಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಗ್ಮಾ ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ನಟಿ ನಗ್ಮಾ, ಚೆನ್ನೈನಲ್ಲಿ ಇತ್ತೀಚೆಗಷ್ಟೇ ದೊಡ್ಡ ಪ್ರವಾಹ ಬಂದಿತ್ತು. ಪ್ರವಾಹ ಸಮಸ್ಯೆಗೆ ತಮಿಳುನಾಡಿಗೆ ದೊಡ್ಡ ಸಮಸ್ಯೆಯಾಗಿ ತಲೆದೋರಿತ್ತು. ಸಂಕಷ್ಟದಲ್ಲಿದ್ದ ಸಮಯದಲ್ಲಿ ಯಾರು ನೆರವಿಗೆ ಬಂದರು ಎಂಬುದನ್ನು ನೆನೆಯಬೇಕಿದೆ. ಸಂಕಷ್ಟದಲ್ಲಿದ್ದ ಜನತೆಗೆ ಕರ್ನಾಟಕ ಸಾಕಷ್ಟು ನೆರವು ನೀಡಿದೆ. ಇದನ್ನು ಎಂದಿರೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಕಾವೇರಿ ನೀರಿನ ಸಮಸ್ಯೆ ಎದುರಾಗಿದೆ. ವಿವಾದ ಕುರಿತಂತೆ ಮಾತನಾಡಿದಷ್ಟು ಸುಲಭವಾಗಿ ಸಮಸ್ಯೆ ಬಗೆಹರಿಯುವುದಿಲ್ಲ. ಕರ್ನಾಟಕದವರು ನಮಗೆ ದ್ರೋಹ ಮಾಡುವುದಿಲ್ಲ. ಸಮಸ್ಯೆಯಿರುವುದರಿಂದ ಅವರು ನೀರು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ಕಾವೇರಿ ನೀರಿಗಿಂತ ದೇಶದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ರೈತರು ಇಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಮುಂದೆ ಕಾವೇರಿ ವಿಚಾರ ದೊಡ್ಡ ವಿಚಾರವೇನಲ್ಲ. ಹೀಗಾಗಿ ವಿವಾದ ಕುರಿತಂತೆ ಬಹಳ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT