ದೇಶ

'ಬಂದ್'ಳೂರು ಟ್ವೀಟ್‌ಗೆ ವ್ಯಾಪಕ ಟೀಕೆ, ಟ್ವೀಟ್ ಡಿಲೀಟ್ ಮಾಡಿದ ಕಿರಣ್ ಮಜುಂದಾರ್

ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ 'ಬಂದ್'ಳೂರು ಟ್ವೀಟ್ ಗೆ ನೆಗೆಟಿವ್ ರಿ-ಟ್ವೀಟ್ ಬಂದಿದ್ದರಿಂದ ತಮ್ಮ ಟ್ವೀಟ್ ಅನ್ನು ಡಿಲೀಟ್...

ಬೆಂಗಳೂರು: ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ 'ಬಂದ್'ಳೂರು ಟ್ವೀಟ್ ಗೆ ನೆಗೆಟಿವ್ ರಿ-ಟ್ವೀಟ್ ಬಂದಿದ್ದರಿಂದ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸಹ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಬದಲಿಗೆ 'ಬಂದ್'ಳೂರು ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಆ ಟ್ವೀಟ್ ಅನ್ನು ಡಿಲೀಟ್ ಮಾಡಿ ಹೊಸದೊಂದು ಟ್ವೀಟ್ ಮಾಡಿದ್ದಾರೆ.

ಕಿರಣ್ ಮಜುಂದಾರ್ ತಮ್ಮ ಹೊಸ ಟ್ವೀಟ್ ನಲ್ಲಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದು. ಎರಡೂ ರಾಜ್ಯಗಳ ಸರ್ಕಾರಗಳು ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಟ್ವೀಟಿಸಿದ್ದಾರೆ.

ಬೆಂಗಳೂರನ್ನು "ಬಂದಳೂರು" ಎಂದು ವ್ಯಂಗ್ಯ ಮಾಡಿದ್ದಾರೆ. "ಮತ್ತೊಂದು ಬಂದ್... ಬೆಂಗಳೂರು ಬಂದಳೂರಾಗಿ ಬದಲಾಗುತ್ತಿದೆ. ಪದೇ ಪದೇ ಬಂದ್ ಮಾಡುವ ಮೂಲಕ ಉತ್ಪಾದನಾ ಕ್ಷೇತ್ರದ ಮೆಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಕಿರಣ್ ಮಜುಂದಾರ್ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT