ಉತ್ತರ ಕೊರಿಯಾದ ಸರ್ವಾಧಿಕಾರಿ ಅಧ್ಯಕ್ಷ ಕಿಮ್‌ ಜಂಗ್‌ 
ದೇಶ

ಉತ್ತರ ಕೊರಿಯಾದ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ಅತ್ಯಂತ ಆತಂಕಕಾರಿ: ಭಾರತ

ಉತ್ತರ ಕೊರಿಯಾ ನಡೆಸಿರುವ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ಭಾರತ ಅತ್ಯಂತ ಆತಂಕಕಾರಿ ವಿಷಯ ಎಂದು ಹೇಳಿದ್ದು, ಕೊರಿಯಾಗೆ ಇಂತಹ ಪರೀಕ್ಷೆಗಳಿಂದ ದೂರಉಳಿಯುವಂತೆ ಸಲಹೆ ನೀಡಿದೆ.

ನವದೆಹಲಿ: ಉತ್ತರ ಕೊರಿಯಾ ನಡೆಸಿರುವ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ಭಾರತ ಅತ್ಯಂತ ಆತಂಕಕಾರಿ ವಿಷಯ ಎಂದು ಹೇಳಿದ್ದು, ಡೆಮಾಕ್ರೆಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾಗೆ ಇಂತಹ ಪರೀಕ್ಷೆಗಳಿಂದ ದೂರಉಳಿಯುವಂತೆ ಸಲಹೆ ನೀಡಿದೆ.

ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ಪ್ರಾದೇಶಿಕ ಹಾಗು ಅಂತಾರಾಷ್ಟ್ರೀಯ ಮಟ್ಟದ ಶಾಂತಿಯ ಮೇಲೆ ಪ್ರತಿಕೂಲ ಪರಿಣಾಮ ಬಿರಲಿದೆ ಎಂದು ಭಾರತ ಅಭಿಪ್ರಾಯಪಟ್ಟಿದ್ದು, ಅಣ್ವಸ್ತ್ರ ಪ್ರಸರಣ ಹಾಗು ಕ್ಷಿಪಣಿ ತಂತ್ರಜ್ಞಾನ ಭಾರತದ ರಾಷ್ಟ್ರೀಯ ಭದ್ರತೆ ಮೇಲೂ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಡೆಮಾಕ್ರೆಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾ(ಡಿಪಿಆರ್ ಕೆ) ನಡೆಸಿರುವ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ವಿರೋಧಿಸುವುದಾಗಿ ತಿಳಿಸಿರುವ ಭಾರತ, ಡಿಪಿಆರ್ ಕೆ ಅಂತಾರಾಷ್ಟ್ರೀಯ ಅಭಿಪ್ರಾಯದ ವಿರುದ್ಧವಾಗಿ ನಡೆದುಕೊಂಡಿದೆ, ಅಷ್ಟೇ ಅಲ್ಲದೆ ಉತ್ತರ ಕೊರಿಯಾ ಸ್ವತಃ ತಾನೇ ಅಂಗೀಕರಿಸಿದ್ದ ಅಣ್ವಸ್ತ್ರ ನಿಶಸ್ತ್ರೀಕರಣ ನೀತಿಯನ್ನು ಮುರಿದಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಅಭಿಪ್ರಾಯದ ವಿರುದ್ಧವಾಗಿ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ನಡೆಸುವುದರಿಂದ ಉತ್ತರ ಕೊರಿಯಾ ದೂರಉಳಿಯಬೇಕು ಎಂದು ವಿಕಾಸ್ ಸ್ವರೂಪ್ ಮನವಿ ಮಾಡಿದ್ದಾರೆ. ಸೆ.9 ರಂದು ಉತ್ತರ ಕೊರಿಯಾ ಇತ್ತೀಚೆಗಷ್ಟೇ ಐದನೇ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ನಡೆಸಿತ್ತು. ಯಾವುದೇ ಪರಮಾಣು ಅಥವಾ ಕ್ಷಿಪಣಿ ಪರೀಕ್ಷೆ ನಡೆಸದಂತೆ ಉತ್ತರ ಕೊರಿಯಾಗೆ ವಿಶ್ವಸಂಸ್ಥೆ ನಿರ್ಬಂಧ ಹೇರಿದೆ. ಹೀಗಿದ್ದರೂ ಕಳೆದ ಜನವರಿಯಲ್ಲಿ ಉತ್ತರ ಕೊರಿಯಾ ನಾಲ್ಕನೇ ಪರಮಾಣು ಪರೀಕ್ಷೆಯನ್ನು ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT