ಗಲಭೆ ಪೀಡಿತ ಕಾಶ್ಮೀರದಲ್ಲಿ ಸಾವಿನ ಸಂಖ್ಯೆ 80 ಕ್ಕೆ ಏರಿಕೆ 
ದೇಶ

ಗಲಭೆ ಪೀಡಿತ ಕಾಶ್ಮೀರದಲ್ಲಿ ಸಾವಿನ ಸಂಖ್ಯೆ 80 ಕ್ಕೆ ಏರಿಕೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.

ಗಲಭೆಯಲ್ಲಿ ಗಾಯಗೊಂಡಿದ್ದ ಯುವಕ ಜಾವಿದ್ ಅಹ್ಮದ್ ದರ್  ಶ್ರೀನಗರದಲ್ಲಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 80 ಕ್ಕೇರಿದೆ. ಮೃತಪಟ್ಟ ಯುವಕ ಆ.5 ರಂದು ಭದ್ರತಾಪಡೆ ಹಾಗೂ ಪ್ರತಿಭಟನಾ ನಿರತರ ನಡುವೆ ನಡೆದ ಘರ್ಷಣೆಯಲ್ಲಿ ಯುವಕ ಗಾಯಗೊಂಡಿದ್ದ. 
ಇದೇ ವೇಳೆ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರು ಆಜಾದಿ ಘೋಷಣೆಗಳನ್ನು ಕೂಗಿದ್ದು, ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಯುಎನ್ ಚಲೋ ಜಾಥಾ ಸಹ ನಡೆದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಣಾಮವಾಗಿ ಕಾಶ್ಮೀರದಲ್ಲಿ 65 ನೇ ದಿನವೂ ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಹಾಗೂ ಕರ್ಫ್ಯೂ ಮುಂದುವರೆದಿದೆ. ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದೂವರೆದಿದ್ದರೂ ಕಣಿವೆಯಲ್ಲಿ ಕರ್ಫ್ಯೂ ವಿಧಿಸಲಾಗಿಲ್ಲ.ಇನ್ನು ಜುಲೈ.9 ರಿಂದ ನಡೆದ ಗಲಭೆಗಳಲ್ಲಿ ಈ ವರೆಗೂ 11,500 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT