ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

9/11 ನ್ಯೂಯಾರ್ಕ್ ದಾಳಿ: ಸಂತ್ರಸ್ಥರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

9/11 ನ್ಯೂಯಾರ್ಕ್ ಮೇಲಿನ ಉಗ್ರರ ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿದ್ದು, ದಾಳಿ ವೇಳೆ ಮರಣವನ್ನಪ್ಪಿದ್ದ ಸಂತ್ರಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ನವದೆಹಲಿ: 9/11 ನ್ಯೂಯಾರ್ಕ್ ಮೇಲಿನ ಉಗ್ರರ ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿದ್ದು, ದಾಳಿ ವೇಳೆ ಮರಣವನ್ನಪ್ಪಿದ್ದ ಸಂತ್ರಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದ ಅವರು  1893ರಲ್ಲಿ ಇದೇ ದಿನ ಐತಿಹಾಸಿಕ ಭಾಷಣವನ್ನು ಮಾಡಿದ್ದರು. ವಿವೇಕಾನಂದ ಅವರ ಈ ಭಾಷಣ ಭಾರತ ಶಕ್ತಿಯನ್ನು ಹೆಚ್ಚಿಸಿತ್ತು. ಭಾರತದ ಶ್ರೀಮಂತ ಸಂಸ್ಕೃತಿ, ಸೋದರತ್ವ, ಬಾಂಧವ್ಯ, ಸಾರ್ವತ್ರಿಕ, ಸಾಮರಸ್ಯದ ಶಕ್ತಿಯನ್ನು ಹೆಚ್ಚಿಸಿತ್ತು.
 
ಇಂತಹ ಐತಿಹಾಸಿಕ ದಿನದಂದೇ ಮನಸ್ಸಿಗೆ ಘಾಸಿಯಾದ ಮತ್ತೊಂದು ದಿನವನ್ನೂ ನೆನೆಯುವಂತಾಗಿದೆ. ನ್ಯೂಯಾರ್ಕ್ ನ ಅವಳಿ ಗೋಪುರಗಳ ಮೇಲೆ 9/11 ರಂದು ದಾಳಿ ನಡೆಸಲಾಗಿತ್ತು. ದಾಳಿ ವೇಳೆ 2,750ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಮರಣವನ್ನಪ್ಪಿದ್ದವರಿಗೆ ಇಂದು ನಾವು ಶ್ರದ್ಧಾಂಜಲಿ ಅರ್ಪಿಸಬೇಕಾಗಿದೆ ಎಂದು ಹೇಳಿದ್ದಾರೆ.

2001 ಸೆ.11 ರಂದು ಅಲ್-ಖೈದಾ ಉಗ್ರ ಸಂಘಟನೆಯ ಗುಂಪು ನ್ಯೂಯಾರ್ಕ್ ಮೇಲೆ ದಾಳಿ ನಡೆಸಿತ್ತು. 2 ಶತಮಾನಗಳ ಅವಧಿಯಲ್ಲಿ ನಡೆದ ಮೊದಲ ವಿದೇಶಿ ದಾಳಿ ಇದಾಗಿತ್ತು. ಈ ದಾಳಿಯು ಇತರೆ ರಾಷ್ಟ್ರಗಳು ಬೆಚ್ಚಿಬೀಳುವಂತೆ ಮಾಡಿತ್ತು.

ಉಗ್ರರು ಅಪಹರಿಸಿದ್ದ ಎರಡು ಪ್ರಯಾಣಿಕ ವಿಮಾನಗಳು ವರ್ಲ್ಡ್ ಟ್ರೇಡ್ ಸೆಂಟರ್ ನ ಅವಳಿ ಗೋಪುರಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ 2 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಲೆಕ್ಕವಿಲ್ಲದಷ್ಟು ಜನರು ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದರು. ಇದೀಗ ವರ್ಲ್ಡ್ ಟ್ರೇಡ್ ಸೆಂಟರ್ ಸಂಪೂರ್ಣವಾಗಿ ಪುನರ್ ನಿರ್ಮಾಣವಾಗಿದ್ದು, ಆ ಸ್ಥಳದಲ್ಲಿ ಸೆ.11 ಸ್ಮಾರಕ ಮತ್ತು ವಸ್ತು ಸಂಗ್ರಹಾಲಯ, ಜಗತ್ತಿನ ಅತ್ಯಂತ ದುಬಾರಿ ರೈಲು ನಿಲ್ದಾಣ ಇನ್ನಿತರೆ ಕಲಾ ಕೇಂದ್ರ, ಕಚೇರಿಗಳು ನಿರ್ಮಾಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT