ಮೆಟ್ಟೂರು ಜಲಾಶಯ (ಸಂಗ್ರಹ ಚಿತ್ರ) 
ದೇಶ

ತಮಿಳುನಾಡಿಗೆ ಹರಿದ ಕಾವೇರಿ; ಮೆಟ್ಟೂರು ಜಲಾಶಯದಲ್ಲಿ ನೀರಿನ ಮಟ್ಟ 80 ಅಡಿಗೆ ಏರಿಕೆ

ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ ಅಲ್ಲಿನ ಮೆಟ್ಟೂರು ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಭಾನುವಾರದ ವೇಳೆಗೆ ನೀರಿನ ಪ್ರಮಾಣ 80 ಅಡಿಗೆ ಏರಿಕೆಯಾಗಿದೆ.

ಚೆನ್ನೈ: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ ಅಲ್ಲಿನ ಮೆಟ್ಟೂರು ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಭಾನುವಾರದ ವೇಳೆಗೆ ನೀರಿನ  ಪ್ರಮಾಣ 80 ಅಡಿಗೆ ಏರಿಕೆಯಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಳೆದ ಹಲವು ದಿನಗಳಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಕಾವೇರಿ ನೀರು ತಮಿಳುನಾಡು ಪ್ರವೇಶಿಸುವ ಬಿಳಿಗೊಂಡ್ಲುವಿನಲ್ಲಿ  ಶುಕ್ರವಾರ  ನೀರಿನ ಹರಿವಿನ ಪ್ರಮಾಣ 9 ಸಾವಿರ ಕ್ಯೂಸೆಕ್‌  ಇತ್ತು. ಭಾನುವಾರ ಬೆಳಿಗ್ಗೆ ವೇಳೆಗೆ ನೀರಿನ ಹರಿವಿನ ಪ್ರಮಾಣ 16 ಸಾವಿರ ಕ್ಯೂಸೆಕ್‌ಗೆ ಏರಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ  ಮೆಟ್ಟೂರು ಡ್ಯಾಂ ನಲ್ಲಿ ಒಟ್ಟಾರೆ 42.4 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಹೇಳಲಾಗುತ್ತಿದೆ.

ಇದೇ ರೀತಿ ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಯುತ್ತಿದ್ದರೆ ಕೆಲವೇ ದಿನಗಳಲ್ಲಿ ಮೆಟ್ಟೂರು ಜಲಾಶಯದ ನೀರಿನ ಮಟ್ಟ 90 ಅಡಿಗೆ ಏರಲಿದೆ.

ಇನ್ನು ಅಪಾರ ಪ್ರಮಾಣದಲ್ಲಿ ಮೆಟ್ಟೂರು ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ತಮಿಳುನಾಡು ರೈತರು ಖುಷಿಗೊಂಡಿದ್ದು, ಕಳೆದ 2 ದಿನಗಳಿಂದ ನೀರಿಗೆ ಬಾಗಿನ ಸಮರ್ಪಿಸಿ ತಮ್ಮ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT