ದೇಶ

ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯ ಕಡಿತದ ಪರವಾಗಿದ್ದೇನೆ: ಮನೋಹರ್ ಪರಿಕ್ಕರ್

Srinivas Rao BV

ವಡೋದರಾ: ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರತಿಕ್ರಿಯೆ ನೀಡಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಈ ಹಿಂದೆಯೇ ವಾಪಸ್ ಪಡೆಯಬೇಕಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಪರವಾಗಿದೆ ಎಂಬ ಸೂಚನೆ ನೀಡಿದ್ದಾರೆ.

ವಡೋದರಾದಲ್ಲಿ ನಡೆದ ಎಫ್ ಜಿಐ ಎಕ್ಸಲೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮನೋಹರ್ ಪರಿಕ್ಕರ್, ಪಿಟಿಐ ಪತ್ರಕರ್ತರು ಕಾಶ್ಮೀರಿ ಪ್ರತ್ಯೇಕತಾವಾದಿಗಳು ಪಡೆಯುತ್ತಿರುವ ಸೌಲಭ್ಯಗಳನ್ನು ಮುಂದುವರೆಸಬೇಕೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ಪ್ರತ್ಯೇಕತಾವಾದಿಗಳು  ಸರ್ಕಾರದಿಂದ ವಿಶೇಷ ಸೌಲಭ್ಯಗಳನ್ನು ಪಡೆಯುತ್ತಿರುವುದರ ಬಗ್ಗೆ ಆತಂಕವಿದೆ. ಅವರಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಪರವಾಗಿದ್ದೇನೆ ಎಂದು ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
 
ಕೇಂದ್ರ ಸರ್ಕಾರ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ವಿಶೇಷ ಸೌಲಭ್ಯಗಳನ್ನು ವಾಪಸ್ ಪಡೆಯುತ್ತದೆ ಎಂಬ ವಿಚಾರದ ಬಗ್ಗೆ ವರದಿಗಳು ಪ್ರಕಟವಾದ ಬೆನ್ನಲ್ಲೇ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

SCROLL FOR NEXT