ಸಾಂದರ್ಭಿಕ ಚಿತ್ರ 
ದೇಶ

ಹೊತ್ತಿ ಉರಿಯುತ್ತಿರುವ ಬೆಂಗಳೂರು: ರಾಜ್ಯದ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ...

ನವದೆಹಲಿ: ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ ನಿನ್ನೆ(ಸೋಮವಾರ) ಹಿಂಸಾರೂಪಕ್ಕೆ ತಿರುಗಿತು. ಸುಪ್ರೀಂ ಕೋರ್ಟ್ ನ ಮಾರ್ಪಾಡು ಆದೇಶ ನಿನ್ನೆ ಹೊರಬಿದ್ದ ಮೇಲಂತೂ ಅದು ಇನ್ನೂ ಹೆಚ್ಚಾಯಿತು. 
ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕರ್ನಾಟಕ ಮತ್ತು ತಮಿಳು ನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
ವಿಶೇಷ ಅರೆಸೈನಿಕ ಪಡೆಯ ಸಾವಿರ ಸಿಬ್ಬಂದಿಯನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ. ಕರ್ನಾಟಕದ ಗಲಭೆಪೀಡಿತ ಪ್ರದೇಶಗಳಿಗೆ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಅಗತ್ಯಬಿದ್ದರೆ ತಮಿಳು ನಾಡಿಗೂ ಕೂಡ ಕೇಂದ್ರ ಮೀಸಲು ಪೊಲೀಸ್ ಪಡೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ. 
ಗಡಿ ಭದ್ರತಾ ಪಡೆಯ 5-10 ತುಕಡಿಗಳನ್ನು ಮತ್ತು ಭಾರತ-ಟಿಬೆಟನ್ ಗಡಿ ಪೊಲೀಸರನ್ನು ಹೆಚ್ಚುವರಿಯಾಗಿ ಇರಿಸಲಾಗಿದ್ದು, ಅಗತ್ಯಬಿದ್ದರೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!