ಸಾಂದರ್ಭಿಕ ಚಿತ್ರ 
ದೇಶ

ಹೊತ್ತಿ ಉರಿಯುತ್ತಿರುವ ಬೆಂಗಳೂರು: ರಾಜ್ಯದ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ...

ನವದೆಹಲಿ: ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ ನಿನ್ನೆ(ಸೋಮವಾರ) ಹಿಂಸಾರೂಪಕ್ಕೆ ತಿರುಗಿತು. ಸುಪ್ರೀಂ ಕೋರ್ಟ್ ನ ಮಾರ್ಪಾಡು ಆದೇಶ ನಿನ್ನೆ ಹೊರಬಿದ್ದ ಮೇಲಂತೂ ಅದು ಇನ್ನೂ ಹೆಚ್ಚಾಯಿತು. 
ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕರ್ನಾಟಕ ಮತ್ತು ತಮಿಳು ನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
ವಿಶೇಷ ಅರೆಸೈನಿಕ ಪಡೆಯ ಸಾವಿರ ಸಿಬ್ಬಂದಿಯನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ. ಕರ್ನಾಟಕದ ಗಲಭೆಪೀಡಿತ ಪ್ರದೇಶಗಳಿಗೆ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಅಗತ್ಯಬಿದ್ದರೆ ತಮಿಳು ನಾಡಿಗೂ ಕೂಡ ಕೇಂದ್ರ ಮೀಸಲು ಪೊಲೀಸ್ ಪಡೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ. 
ಗಡಿ ಭದ್ರತಾ ಪಡೆಯ 5-10 ತುಕಡಿಗಳನ್ನು ಮತ್ತು ಭಾರತ-ಟಿಬೆಟನ್ ಗಡಿ ಪೊಲೀಸರನ್ನು ಹೆಚ್ಚುವರಿಯಾಗಿ ಇರಿಸಲಾಗಿದ್ದು, ಅಗತ್ಯಬಿದ್ದರೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

T20 Cricket: ನಾಯಕತ್ವದಿಂದ ಗೇಟ್ ಪಾಸ್ ಬಳಿಕ ಸೂರ್ಯಕುಮಾರ್ ಮೊದಲ ಪೋಸ್ಟ್ ವೈರಲ್!

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ, ಟ್ರಸ್ಟ್ ವಿರುದ್ಧ ಗಂಭೀರ ಆರೋಪ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ನಮ್ಮ ದಯೆಯಿಂದ TVK ಸರ್ಕಾರ ಉಳಿದಿದೆ: ಶೀಘ್ರದಲ್ಲೇ ಬೀಳಿಸ್ತೀವಿ- DMK ಅಧ್ಯಕ್ಷ ಸ್ಟಾಲಿನ್!

SCROLL FOR NEXT