ಕಾಶ್ಮೀರ ಪರಿಸ್ಥಿತಿ ಚಿತ್ರ 
ದೇಶ

ಕಾಶ್ಮೀರ: ಬಕ್ರೀದ್ ಪ್ರಾರ್ಥನೆ ಬಳಿಕ ಹಿಂಸಾಚಾರ, 2 ಸಾವು

ಕಾಶ್ಮೀರ ಕಣಿವೆಯಲ್ಲಿ ಈದ್ ಪ್ರಾರ್ಥನೆ ಬಳಿಕ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ...

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಈದ್ ಪ್ರಾರ್ಥನೆ ಬಳಿಕ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.

ಇಂಡಿಯನ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ಹೆಚ್ಚಿನ ಹಿಂಸಾಚಾರವನ್ನು ತಪ್ಪಿಸಲು ಶ್ರೀನಗರ ಸೇರಿದಂತೆ ಪ್ರಮುಖ ನಗರ ಮತ್ತು ಪಟ್ಟಣಗಳಲ್ಲಿ ಈದ್ ಸಂಬಂಧ ಸಾರ್ವಜನಿಕ ಸಭೆಗೆ ಆಯಾ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಶ್ರೀನಗರದ ಪ್ರಖ್ಯಾತ ಹಸ್ರತ್ ಬಾಲ್ ಸಮಾಧಿ ಬಳಿ ಮುಸಲ್ಮಾನರು ಪ್ರಾರ್ಥನೆ ಸಲ್ಲಿಸುತ್ತಿಲ್ಲ. ಜನರು ಸ್ಥಳೀಯ ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸಬಹುದು ಎಂದು ಹೇಳಿತ್ತು.

ಸಾಮಾನ್ಯವಾಗಿ ಬಕ್ರೀದ್ ದಿನ ಜನರಿಂದ ಗಿಜಿಗಿಡುತ್ತಿದ್ದ ಶ್ರೀನಗರದ ಮಾರುಕಟ್ಟೆಯಲ್ಲಿ ಇಂದು ಜನರಿಲ್ಲದೆ ನಿರ್ಜನತೆ ಕಾಡುತ್ತಿದೆ. ಬೇಕರಿ ಮತ್ತು ತಿಂಡಿ ತಿನಿಸುಗಳ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಕುರಿ ಮತ್ತು ಮೇಕೆಯ ಮಾರಾಟಕ್ಕೆ ಕಾಯುತ್ತಿದ್ದ ಮಾರಾಟಗಾರರಿಗೆ ಈ ವರ್ಷ ವ್ಯಾಪಾರ ಅಷ್ಟೊಂದು ಉತ್ತಮವಾಗಿ ಆಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT