ಕೇಕ್(ಸಂಗ್ರಹ ಚಿತ್ರ) 
ದೇಶ

ಕುರಿ ಆಕಾರದ ಕೇಕ್ ಕತ್ತರಿಸಿ ಮುಸ್ಲಿಂ ರಾಷ್ಟ್ರೀಯ ಮಂಚ್ ನಿಂದ ಪರಿಸರ ಸ್ನೇಹಿ ಬಕ್ರೀದ್ ಆಚರಣೆ!

ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ್ನು ಆರ್ ಎಸ್ ಎಸ್ ನ ಮುಸ್ಲಿಮ್ ಘಟಕ ಪರಿಸರಸ್ನೇಹಿಯಾಗಿ ಆಚರಿಸಲು ನಿರ್ಧರಿಸಿದೆ.

ಲಖನೌ: ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ್ನು ಆರ್ ಎಸ್ ಎಸ್ ನ ಮುಸ್ಲಿಮ್ ಘಟಕ ಪರಿಸರಸ್ನೇಹಿಯಾಗಿ ಆಚರಿಸಲು ನಿರ್ಧರಿಸಿದೆ. 
ಸಾಮಾನ್ಯವಾಗಿ ಬಕ್ರೀದ್ ದಿನದಂದು ಪ್ರಾಣಿಗಳನ್ನು ಬಲಿಕೊಟ್ಟು ಹಬ್ಬವನ್ನು ಆಚರಿಸುತ್ತಾರೆ. ಆದರೆ ಆರ್ ಎಸ್ ಎಸ್ ನ ಮುಸ್ಲಿಂ ಘಟಕ ಮುಸ್ಲಿಂ ರಾಷ್ಟ್ರೀಯ ಮಂಚ್ ನ ಕಾರ್ಯಕರ್ತರು ಕುರಿ ಆಕಾರದ ಕೇಕ್ ನ್ನು ಕತ್ತರಿಸುವ ಮೂಲಕ ಪರಿಸರ ಸ್ನೇಹಿ ಬಕ್ರೀದ್ ನ್ನು ಆಚರಣೆ ಮಾಡಲು ತೀರ್ಮಾನಿಸಿದ್ದಾರೆ. 
ಲಖನೌದಲ್ಲಿರುವ ಪಕ್ಷದ ಕಚೇರಿಯಲ್ಲಿ 5 ಕೆಜಿ ತೂಕದ ಕೇಕ್ ನ್ನು ಕತ್ತರಿಸಲು ಸಿದ್ಧತೆ ನಡೆಸಲಾಗಿದ್ದು, ಮುಸ್ಲಿಂ ರಾಷ್ಟ್ರೀಯ ಮಂಚ್ ನ ಕಾರ್ಯಕರ್ತರು ತಮ್ಮ ಮನೆಗಳಲ್ಲಿಯೂ ಸಹ ಬಿರ್ಯಾನಿ ತಯಾರಿಸದೇ ಇರಲು ನಿರ್ಧರಿಸಿದ್ದಾರೆ. ಬದಲಾಗಿ ದಹಿ ವಡಾ ಹಾಗೂ ಇನ್ನಿತರ ತಿನಿಸುಗಳನ್ನು ತಯಾರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಣಿಗಳನ್ನು ಬಲಿ ಕೊಡದೇ ಇರುವುದು ಪರಿಸರಕ್ಕೆ ಒಳಿತು ಎಂಬ ಕಾರಣದಿಂದ ಈ ಬಾರಿ ಬಕ್ರೀದ್ ನ್ನು ಹಾಗೂ ಇನ್ನಿತರ ಸಮಾರಂಭ, ಹಬ್ಬಗಳ ವೇಳೆ ಪ್ರಾಣಿ ಬಲಿ ಕೊಡದಂತೆ ಹಲವು ಪರಿಸರವಾದಿಗಳು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT