ಕೇಕ್(ಸಂಗ್ರಹ ಚಿತ್ರ) 
ದೇಶ

ಕುರಿ ಆಕಾರದ ಕೇಕ್ ಕತ್ತರಿಸಿ ಮುಸ್ಲಿಂ ರಾಷ್ಟ್ರೀಯ ಮಂಚ್ ನಿಂದ ಪರಿಸರ ಸ್ನೇಹಿ ಬಕ್ರೀದ್ ಆಚರಣೆ!

ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ್ನು ಆರ್ ಎಸ್ ಎಸ್ ನ ಮುಸ್ಲಿಮ್ ಘಟಕ ಪರಿಸರಸ್ನೇಹಿಯಾಗಿ ಆಚರಿಸಲು ನಿರ್ಧರಿಸಿದೆ.

ಲಖನೌ: ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ್ನು ಆರ್ ಎಸ್ ಎಸ್ ನ ಮುಸ್ಲಿಮ್ ಘಟಕ ಪರಿಸರಸ್ನೇಹಿಯಾಗಿ ಆಚರಿಸಲು ನಿರ್ಧರಿಸಿದೆ. 
ಸಾಮಾನ್ಯವಾಗಿ ಬಕ್ರೀದ್ ದಿನದಂದು ಪ್ರಾಣಿಗಳನ್ನು ಬಲಿಕೊಟ್ಟು ಹಬ್ಬವನ್ನು ಆಚರಿಸುತ್ತಾರೆ. ಆದರೆ ಆರ್ ಎಸ್ ಎಸ್ ನ ಮುಸ್ಲಿಂ ಘಟಕ ಮುಸ್ಲಿಂ ರಾಷ್ಟ್ರೀಯ ಮಂಚ್ ನ ಕಾರ್ಯಕರ್ತರು ಕುರಿ ಆಕಾರದ ಕೇಕ್ ನ್ನು ಕತ್ತರಿಸುವ ಮೂಲಕ ಪರಿಸರ ಸ್ನೇಹಿ ಬಕ್ರೀದ್ ನ್ನು ಆಚರಣೆ ಮಾಡಲು ತೀರ್ಮಾನಿಸಿದ್ದಾರೆ. 
ಲಖನೌದಲ್ಲಿರುವ ಪಕ್ಷದ ಕಚೇರಿಯಲ್ಲಿ 5 ಕೆಜಿ ತೂಕದ ಕೇಕ್ ನ್ನು ಕತ್ತರಿಸಲು ಸಿದ್ಧತೆ ನಡೆಸಲಾಗಿದ್ದು, ಮುಸ್ಲಿಂ ರಾಷ್ಟ್ರೀಯ ಮಂಚ್ ನ ಕಾರ್ಯಕರ್ತರು ತಮ್ಮ ಮನೆಗಳಲ್ಲಿಯೂ ಸಹ ಬಿರ್ಯಾನಿ ತಯಾರಿಸದೇ ಇರಲು ನಿರ್ಧರಿಸಿದ್ದಾರೆ. ಬದಲಾಗಿ ದಹಿ ವಡಾ ಹಾಗೂ ಇನ್ನಿತರ ತಿನಿಸುಗಳನ್ನು ತಯಾರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಣಿಗಳನ್ನು ಬಲಿ ಕೊಡದೇ ಇರುವುದು ಪರಿಸರಕ್ಕೆ ಒಳಿತು ಎಂಬ ಕಾರಣದಿಂದ ಈ ಬಾರಿ ಬಕ್ರೀದ್ ನ್ನು ಹಾಗೂ ಇನ್ನಿತರ ಸಮಾರಂಭ, ಹಬ್ಬಗಳ ವೇಳೆ ಪ್ರಾಣಿ ಬಲಿ ಕೊಡದಂತೆ ಹಲವು ಪರಿಸರವಾದಿಗಳು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

LPG ಬಿಕ್ಕಟ್ಟು ತೀವ್ರ: ಬೆಂಗಳೂರಿನ ಆಟೋ ಚಾಲಕರ ಬದುಕು ಬೀದಿಗೆ!

SCROLL FOR NEXT