ಸುಪ್ರೀಂ ಕೋರ್ಟ್ 
ದೇಶ

ಕೋರ್ಟ್ ನಲ್ಲಿ ಪ್ರತ್ಯೇಕವಾದಿಗಳು ಎಂಬ ಪದ ಬಳಸಬೇಡಿ: ಸುಪ್ರೀಂ ಕೋರ್ಟ್

ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ ನೀಡಲಾಗುತ್ತಿರುವ ಕೇಂದ್ರದ ಅನುದಾನ ಮತ್ತು ಭದ್ರತೆಯನ್ನು ಹಿಂಪಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ...

ನವದೆಹಲಿ: ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ ನೀಡಲಾಗುತ್ತಿರುವ ಕೇಂದ್ರದ ಅನುದಾನ ಮತ್ತು ಭದ್ರತೆಯನ್ನು ಹಿಂಪಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಹುರಿಯತ್ ನಾಯಕರನ್ನು ಪ್ರತ್ಯೇಕವಾದಿಗಳು ಎಂದು ಕರೆದ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಉದಯ್ ಉಮೇಶ್ ಲಲಿತ್ ಅವರನ್ನೊಳಗೊಂಡ ಸುಪ್ರೀ ಪೀಠ, ಭದ್ರತೆ ಮತ್ತು ಇತರ ಕಾರಣಗಳಿಗೆ ಅನುದಾನ ನೀಡುವ ವಿಷಯ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದು' ಎಂದು ಹೇಳಿದೆ. ಅಲ್ಲದೆ ತನ್ನ ಆದೇಶದಲ್ಲಿ ಪ್ರತ್ಯೇತವಾದಿಗಳು ಎಂಬ ಪದ ಬಳಸಲು ನಿರಾಕರಿಸಿದೆ.
'ಇದು ಅನುಭವಕ್ಕೆ ಸಂಬಂಧಿಸಿದ ವಿಷಯ. ಸರ್ಕಾರ ಅವರನ್ನು ಪ್ರತ್ಯೇಕವಾದಿಗಳು ಎಂದು ಘೋಷಿಸಿದೆಯಾ? ನೀವು ಒಬ್ಬ ವ್ಯಕ್ತಿಯನ್ನು ಹೇಗೆ ಬೇಕಾದರೂ ಕರೆದುಕೊಳ್ಳಬಹುದು. ಆದರೆ ಅದೇ ಪದವನ್ನು ಕೋರ್ಟ್ ನಲ್ಲಿ ಬಳಸಬಾರದು' ಎಂದು ಕೋರ್ಟ್ ಹೇಳಿದೆ.
ಪ್ರತ್ಯೇಕವಾದಿಗಳ ವಿದೇಶ ಪ್ರವಾಸ ಮತ್ತು ಭದ್ರತೆ ಹಾಗೂ ಇತರೆ ವೆಚ್ಚಗಳಿಗೆ ಸರ್ಕಾರ ಸುಮಾರು 100 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದು, ಇದನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಕೋರಿ ಸೆಪ್ಟೆಂಬರ್ 8ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT