ಬಿಕ್ರಮ್ ಸಿಂಗ್ ಮಿಜಿಥಾಯ್‌ 
ದೇಶ

ವಿಧಾನಸಭೆ ಅಧಿವೇಶನದಲ್ಲೇ ಕಂದಾಯ ಸಚಿವರ ಮೇಲೆ ಶೂ ಎಸೆದ ಕಾಂಗ್ರೆಸ್ ಶಾಸಕ

ಪಂಜಾಬ್ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಿಜಿಥಾಯ್‌ ಅವರತ್ತ ಶೂ ಎಸೆದ ಘಟನೆ...

ಚಂಡಿಗಢ: ಪಂಜಾಬ್ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಿಜಿಥಾಯ್‌ ಅವರತ್ತ ಶೂ ಎಸೆದ ಘಟನೆ ಬುಧವಾರ ನಡೆದಿದೆ.
ಪ್ರತಿಪಕ್ಷಗಳ ಗದ್ದಲದ ನಡುವೆಯೇ ಪಂಜಾಬ್‌ನ ಎಸ್ಎಡಿ- ಬಿಜೆಪಿ ಸರ್ಕಾರ 10 ನಿಮಿಷದಲ್ಲಿ 12 ಮಸೂದೆ ಪಾಸ್ ಮಾಡಿದೆ. ಸರ್ಕಾರದ ಈ ಕ್ರಮ ಖಂಡಿಸಿ ಕಾಂಗ್ರೆಸ್‌ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಪೇಪರ್, ಪುಸ್ತಕಗಳನ್ನು ಸ್ಪೀಕರ್‌ ಕಡೆಗೆ ಎಸೆದರು. ಆದರೆ ಭದ್ರತಾ ಸಿಬ್ಬಂದಿ ಇದ್ದರಿಂದ ಅವು ಸ್ಪೀಕರ್‌ಗೆ ತಾಗಿಲ್ಲ. 
ಇದೇ ವೇಳೆ ಕಾಂಗ್ರೆಸ್ ಶಾಸಕ ತರಲೋಚನ್‌ ಸುಂದ್ ಅವರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಅವರತ್ತ ಶೂ ಎಸೆದಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಚರಣ್ ಜೀತ್ ಅತ್ವಾಲ್ ಅವರು ಶೂನ್ಯ ವೇಳೆ ಮತ್ತು ಪ್ರಶ್ತೋತ್ತರ ಅವಧಿಯನ್ನು ರದ್ದುಗೊಳಿಸಿದ್ದು, ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT