ಬಿಕ್ರಮ್ ಸಿಂಗ್ ಮಿಜಿಥಾಯ್‌ 
ದೇಶ

ವಿಧಾನಸಭೆ ಅಧಿವೇಶನದಲ್ಲೇ ಕಂದಾಯ ಸಚಿವರ ಮೇಲೆ ಶೂ ಎಸೆದ ಕಾಂಗ್ರೆಸ್ ಶಾಸಕ

ಪಂಜಾಬ್ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಿಜಿಥಾಯ್‌ ಅವರತ್ತ ಶೂ ಎಸೆದ ಘಟನೆ...

ಚಂಡಿಗಢ: ಪಂಜಾಬ್ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಿಜಿಥಾಯ್‌ ಅವರತ್ತ ಶೂ ಎಸೆದ ಘಟನೆ ಬುಧವಾರ ನಡೆದಿದೆ.
ಪ್ರತಿಪಕ್ಷಗಳ ಗದ್ದಲದ ನಡುವೆಯೇ ಪಂಜಾಬ್‌ನ ಎಸ್ಎಡಿ- ಬಿಜೆಪಿ ಸರ್ಕಾರ 10 ನಿಮಿಷದಲ್ಲಿ 12 ಮಸೂದೆ ಪಾಸ್ ಮಾಡಿದೆ. ಸರ್ಕಾರದ ಈ ಕ್ರಮ ಖಂಡಿಸಿ ಕಾಂಗ್ರೆಸ್‌ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಪೇಪರ್, ಪುಸ್ತಕಗಳನ್ನು ಸ್ಪೀಕರ್‌ ಕಡೆಗೆ ಎಸೆದರು. ಆದರೆ ಭದ್ರತಾ ಸಿಬ್ಬಂದಿ ಇದ್ದರಿಂದ ಅವು ಸ್ಪೀಕರ್‌ಗೆ ತಾಗಿಲ್ಲ. 
ಇದೇ ವೇಳೆ ಕಾಂಗ್ರೆಸ್ ಶಾಸಕ ತರಲೋಚನ್‌ ಸುಂದ್ ಅವರು ಕಂದಾಯ ಸಚಿವ ಬಿಕ್ರಮ್ ಸಿಂಗ್ ಅವರತ್ತ ಶೂ ಎಸೆದಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಚರಣ್ ಜೀತ್ ಅತ್ವಾಲ್ ಅವರು ಶೂನ್ಯ ವೇಳೆ ಮತ್ತು ಪ್ರಶ್ತೋತ್ತರ ಅವಧಿಯನ್ನು ರದ್ದುಗೊಳಿಸಿದ್ದು, ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!