ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿಯವರ 'ಕಾಟ್ ಸಭಾ'ದಲ್ಲಿ ಮತ್ತೊಮ್ಮೆ ಮಂಚಕ್ಕಾಗಿ ಹೊಡೆದಾಡಿದ ಜನತೆ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆ...

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆ ಮುಕ್ತಾಯವಾದ ಕೂಡಲೇ ಅಲ್ಲಿನ ಸ್ಥಳೀಯರು ಮಂಚಕ್ಕಾಗಿ ಜಗಳ ಮಾಡಿಕೊಂಡ ಘಟನೆ ಮತ್ತೊಮ್ಮೆ ನಡೆದಿದೆ. ಅಷ್ಟೇ ಅಲ್ಲ, ಕೆಲವೇ ಹೊತ್ತಿನಲ್ಲಿ ಅಲ್ಲಿಂದ ಮಂಚಗಳು ಕಣ್ಮರೆಯಾಗಿದವು.
ಸಾರ್ವಜನಿಕ ಸಭೆ ಆಯೋಜಿಸಿದ್ದ ಸಂಘಟಕರು ಧ್ವನಿವರ್ಧಕದಲ್ಲಿ ಮಂಚಗಳನ್ನು ಅಲ್ಲೇ ಬಿಟ್ಟು ಹೋಗಿ ಎಂದು ಕೂಗಿ ಹೇಳುತ್ತಿದ್ದರೂ ಕೂಡ ಅದನ್ನು ಕೇಳಿಯೂ ಕೇಳಿಸದಂತೆ ಸ್ಥಳೀಯರು ಮಂಚವನ್ನು ಹೊತ್ತುಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.
ಇನ್ನೊಂದು ಗಮನಿಸಬೇಕಾದ ಅಂಶವೆಂದರೆ ಮಂಚ ಸಿಗದವರು ತಮಗೆ ಮನೆಗೆ ಕೊಂಡುಹೋಗಲು ಮಂಚ ಸಿಗಲಿಲ್ಲವಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು.
''ಇಂದು ಮಿರ್ಜಾಪುರದಲ್ಲಿ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರೆ ಮಂಚ ನೀಡುತ್ತೇವೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಭರವಸೆ ನೀಡಿದ್ದರು. ಆದರೆ ಆ ಪಕ್ಷದವರು ನಮಗೆ ಏನೂ ಕೊಡಲಿಲ್ಲ ಅಂತ ಬೇಸರವಾಗುತ್ತಿದೆ.ನನಗೆ ಬಂದದ್ದಕ್ಕೆ ಸಿಕ್ಕಿದ್ದು ಇದೊಂದೇ ಎಂದು ಕಾಂಗ್ರೆಸ್ ಧ್ವಜವನ್ನು ತೋರಿಸಿಕೊಂಡು ಕೈಲಾಶ್ ನಾಥ್ ಕೇಸರಿ ಎಂಬವನು ಹೇಳಿದ್ದಾನೆ.
ತಮ್ಮ ಎರಡನೇ ಹಂತದ ಕಿಸಾನ್ ಯಾತ್ರೆಯನ್ನು ಇಂದು ಮಿಜೋರಂನಲ್ಲಿ ಆರಂಭಿಸಿದ ರಾಹುಲ್ ಗಾಂಧಿ ಮದಿಹಾನ್ ನಲ್ಲಿ ಕಾಟ್ ಸಭಾ ನಡೆಸಿದ್ದರು. ತಮ್ಮ ಎರಡನೇ ಹಂತದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಮಿರ್ಜಾಪುರ, ಬದೋಹಿ ಮತ್ತು ಅಲಹಾಬಾದ್ ಜಿಲ್ಲೆಗಳಲ್ಲಿ ಖಾಟ್ ಸಭಾ ಮತ್ತು ಸಾರ್ವಜನಿಕ ಸಭೆಗಳನ್ನು ಆಯೋಜಿಸಲಿದ್ದು ಒಟ್ಟು 164 ಕಿಲೋ ಮೀಟರ್ ಸಂಚರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT