ಸತ್ಯೇಂದ್ರ ಜೈನ್ 
ದೇಶ

ಚಿಕನ್ ಗುನ್ಯಾ ಬಂದರೇ ಸಾಯುವುದಿಲ್ಲ ಎಂದು ಗೂಗಲ್ ಹೇಳುತ್ತದೆ: ಸಚಿವ

ಮನುಷ್ಯನಿಗೆ ಚಿಕನ್ ಗುನ್ಯಾ ಬಂದರೆ ಆತ ಸಾಯುವುದಿಲ್ಲ ಎಂದು ಗೂಗಲ್ ತಿಳಿಸಿದೆ ಎಂದು ಹೇಳುವ ಮೂಲಕ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಮ್ಮ ...

ನವದೆಹಲಿ: ಮನುಷ್ಯನಿಗೆ ಚಿಕನ್ ಗುನ್ಯಾ ಬಂದರೆ ಆತ ಸಾಯುವುದಿಲ್ಲ ಎಂದು ಗೂಗಲ್ ತಿಳಿಸಿದೆ ಎಂದು ಹೇಳುವ ಮೂಲಕ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕನ್ ಗುನ್ಯಾ ರೋಗ ಬಂದರೇ ದೆಹಲಿ ವಾಸಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಚಿಕನ್ ಗುನ್ಯಾ ಬಂದ ರೋಗಿಗಳು ವೆಚ್ಚ ಭರಿಸಲು ಸರ್ಕಾರ ಸಹಾಯ ಮಾಡುತ್ತದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಾದರೇ, ರೋಗಿಗಳು ಹೆದರದೇ ವೈದ್ಯರ ಸಲಹೆಯನ್ನು  ಪಾಲಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಚಿಕನ್ ಗುನ್ಯಾದಿಂದ ಪ್ರಪಂಚದಲ್ಲಿ ಯಾರು ಸಾವನ್ನಪ್ಪಿಲ್ಲ, ಆದರೆ ದೆಹಲಿಯಲ್ಲಿ ಮಾತ್ರವೇ ಏಕೆ ಜನ ಚಿಕನ್ ಗುನ್ಯಾದಿಂದ ಸಾಯುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೆಲವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದವು, ವಯಸ್ಸಾದವರು ಮಾತ್ರ ಸಾವನ್ನಪ್ಪಿದ್ದಾರೆ, ಚಿಕನ್ ಗುನ್ಯಾದಿಂದ ಅಲ್ಲ ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT