ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್ (ಸಂಗ್ರಹ ಚಿತ್ರ) 
ದೇಶ

ಎಸ್ ಪಿ ಬಿಕ್ಕಟ್ಟು ಶಮನಕ್ಕೆ ಸಂಸದೀಯ ಸಭೆ ಕರೆದ ಮುಲಾಯಂ

ಸಮಾಜವಾದಿ ಪಕ್ಷದಲ್ಲಿ ಕಳೆದೊಂದು ತಿಂಗಳಿನಿಂದ ಮನೆ ಮಾಡಿರುವ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ್ದು, ಬಿಕ್ಕಟ್ಟು ಶಮನಕ್ಕೆ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರು ಸಂಸದೀಯ ಸಭೆ ಕರೆದಿದ್ದಾರೆ.

ನವದೆಹಲಿ: ಸಮಾಜವಾದಿ ಪಕ್ಷದಲ್ಲಿ ಕಳೆದೊಂದು ತಿಂಗಳಿನಿಂದ ಮನೆ ಮಾಡಿರುವ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ್ದು, ಬಿಕ್ಕಟ್ಟು ಶಮನಕ್ಕೆ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್  ಅವರು ಸಂಸದೀಯ ಸಭೆ ಕರೆದಿದ್ದಾರೆ.

ಪಕ್ಷದಲ್ಲಿನ ಬಿಕ್ಕಟ್ಟು ಸಂಬಂಧ ತಮ್ಮ ಬೆಂಬಲದ ಇಬ್ಬರು ಸಚಿವರನ್ನು ಸಿಎಂ ಅಖಿಲೇಶ್ ಯಾದವ್ ಸಂಪುಟದಿಂದ ಕೈಬಿಟ್ಟ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ್ದ ಶಿವಪಾಲ್ ಯಾದವ್ ಅವರು  ತಮ್ಮ ಸಹೋದರ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆ ತಮಗೆ ಅಖಿಲೇಶ್ ಯಾದವ್ ಸಂಪುಟದಲ್ಲಿ ಕಾರ್ಯ  ನಿರ್ವಹಿಸಲು ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಇಂದು ಮುಲಾಯಂ ಸಿಂಗ್ ಯಾದವ್ ನೇತೃತ್ವದಲ್ಲಿ ಪಕ್ಷದ ಸಂಸದೀಯ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಶಮನಗೊಳಿಸಲು ಮುಲಾಯಂ  ಪ್ರಯತ್ನಿಸಲಿದ್ದಾರೆ.

ಇನ್ನು ಕೆಲವೇ ತಿಂಗಳಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಂತದಲ್ಲಿ ಪಕ್ಷದಲ್ಲಿನ ಬಿಕ್ಕಟ್ಟು ಆಡಳಿತಾರೂಢ ಎಸ್ ಪಿಗೆ ಮುಳುವಾಗುವ ಸಾಧ್ಯತೆಗಳಿರುವುದರಿಂದ  ಮುಲಾಯಂ ಶತಾಯಗತಾಯ ಬಿಕ್ಕಟ್ಟ ಶಮನಕ್ಕೆ ಮುಂದಾಗಲಿದ್ದಾರೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT