ಮೊಹಮ್ಮದ್ ಶಹಾಬುದ್ದೀನ್ 
ದೇಶ

ಆರ್‍‍ಜೆಡಿ ಮಾಜಿ ಸಂಸದ ಶಹಾಬುದ್ದೀನ್ ಜಾಮೀನು ರದ್ದು ಕೋರಿ ಸುಪ್ರೀಂಗೆ ಮನವಿ

ವಿವಾದಿತ ಆರ್ ಜೆಡಿ ಪ್ರಭಾವಿ ನಾಯಕ ಮೊಹಮ್ಮದ್ ಶಹಾಬುದ್ದೀನ್ ಜಾಮೀನು ರದ್ದು ಕೋರಿ ಹಿರಿಯ ವಕೀಲ ಪ್ರಶಾಂತ್ ಭೂಷಣ್....

ಪಾಟ್ನಾ: ವಿವಾದಿತ ಆರ್ ಜೆಡಿ ಪ್ರಭಾವಿ ನಾಯಕ ಮೊಹಮ್ಮದ್ ಶಹಾಬುದ್ದೀನ್ ಜಾಮೀನು ರದ್ದು ಕೋರಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ಮನವಿ ಸಲ್ಲಿಸಿದ್ದಾರೆ.
ಸಿವಾನ್ ಮೂಲದ ಚಂದ್ರಕೇಶ್ವರ್ ಪ್ರಸಾದ್ ಎಂಬುವವರು ಸಹ ಆರ್ ಜೆಡಿ ಮಾಜಿ ಸಂಸದ ಶಹಾಬುದ್ದೀನ್ ಗೆ ಜಾಮೀನು ಮಂಜೂರು ಮಾಡಿದ್ದ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಶಹಾಬುದ್ದೀನ್ ಅವರು ಪ್ರಸಾದ್ ಅವರ ಮೂವರು ಮಕ್ಕಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಅಗತ್ಯ ಬಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆಯೂ ಕೋರ್ಟ್ ಮನವಿ ಮಾಡುವುದಾಗಿ ಪ್ರಸಾದ್ ಅವರು ತಿಳಿಸಿದ್ದಾರೆ.
ರಾಜ್ ದಿಯೊ ರಂಜನ್ ಕೊಲೆ ಪ್ರಕರಣ ಹಾಗೂ ಸಿವಾನ್‍  ಎಂಬಲ್ಲಿ ನಡೆದ ಸಹೋದರರ ಹತ್ಯೆ ಪ್ರಕರಣದಲ್ಲಿನ ಸಾಕ್ಷಿದಾರರನ್ನು ಹತ್ಯೆಗೈದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಹಾಬುದ್ದೀನ್ 11 ವರ್ಷಗಳ ನಂತರ ಕಳೆದ ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. 
ಶಹಾಬುದ್ದೀನ್‌ ಬಿಡುಗಡೆಗೆ ಸಂಬಂಧಿಸಿದಂತೆ ನಿತಿಶ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಟ್ವೀಟರ್‌ ನಂತಹ ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. 40 ಕೇಸ್‌ ಹೊಂದಿರುವ ವ್ಯಕ್ತಿ ಬಿಡುಗಡೆಯಾಗಿದ್ದು ,ಲಾಲು-ನಿತಿಶ್‌ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT