ಸೌಂದರ್ಯ ರಜನಿಕಾಂತ್ 
ದೇಶ

ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸೌಂದರ್ಯ ರಜನಿಕಾಂತ್ ನೇಮಕ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ...

ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಹಾಗೂ ಮಂಡಳಿಯ ಸಹ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸೌಂದರ್ಯ ರಜನಿಕಾಂತ್ ಅವರು ಪ್ರಾಣಿ ದಯಾ ಮಂಡಳಿ ಸಹ ಸದಸ್ಯರಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲು ನಮಗೆ ತುಂಬಾ ಸಂತೋಷವಾಗುತ್ತಿದೆ ಎಂದು ಭಾರತೀಯ ಪ್ರಾಣಿ ದಯಾ ಮಂಡಳಿಯ ಉಪಾಧ್ಯಕ್ಷ ಎಸ್. ಚಿನ್ನೆಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಸೌಂದರ್ಯ ಅವರು ಕಂಪ್ಯೂಟರ್ ಗ್ರಾಫಿಕ್ಸ್ ಮತ್ತು ಆನಿಮೇಷನ್ ನಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಅವರಿಂದ ಪ್ರಾಣಿ ದಯಾ ಮಂಡಳಿಗೆ ಸಾಕಷ್ಟು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸಿನಿಮಾಗಳಲ್ಲಿ ಬಳಸುವ ಪ್ರಾಣಿಗಳ ರಕ್ಷಣೆ ಬಗ್ಗೆ ಕಾಳಜಿ ವಹಿಸಲಿದ್ದಾರೆ ಎಂದು ಚಿನ್ನೆಕೃಷ್ಣ ಅವರು ತಿಳಿಸಿದ್ದಾರೆ.
ಚೆನ್ನೈನಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಭಾರತೀಯ ಪ್ರಾಣಿ ದಯಾ ಮಂಡಳಿ,ಪರಿಸರ ಮತ್ತು ಅರಣ್ಯ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT