ಬ್ರಹಮ್‌ದಾಗ್ ಬುಗ್ತಿ 
ದೇಶ

ಅವಕಾಶ ಸಿಕ್ಕರೆ ಖಂಡಿತ ಭಾರತದಲ್ಲಿ ಆಶ್ರಯ ಪಡೆಯುವೆ: ಬಲೂಚ್ ಸ್ವಾತಂತ್ರ್ಯ ಹೋರಾಟಗಾರ ಬುಗ್ತಿ

ಬಲೂಚಿಸ್ತಾನದ ಪ್ರತ್ಯೇಕತವಾದಿಗಳಿಗೆ ಭಾರತದಲ್ಲಿ ಆಶ್ರಯ ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ವರದಿಗಳು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ಮೂಡಿಸಿದೆ.

ನವದೆಹಲಿ: ಪಾಕಿಸ್ತಾನದಿಂದ ಪ್ರತ್ಯೇಕತೆ ಬಯಸುತ್ತಿರುವ ಬಲೂಚಿಸ್ತಾನದ ಪ್ರತ್ಯೇಕತವಾದಿಗಳಿಗೆ ರಾಜಕೀಯ ಬೆಂಬಲ ಹಾಗೂ ಭಾರತದಲ್ಲಿ ಆಶ್ರಯ ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ವರದಿಗಳು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ಮೂಡಿಸಿದೆ.

ಭಾರತ ಸರ್ಕಾರದ ಉದ್ದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ, ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ನಾಯಕ ಬ್ರಹಮ್‌ದಾಗ್ ಬುಗ್ತಿ, "ಭಾರತದಲ್ಲಿ ನೆಲೆಸಲು ಅವಕಾಶ ಸಿಕ್ಕರೆ ನನ್ನ ಜನರಿಗಾಗಿ ಖಂಡಿತಾ ಹೋಗುವೆ ಎಂದು ಹೇಳಿದ್ದಾರೆ. ಭಾರತ ಸರ್ಕಾರದ ಆಶ್ರಯದ ಪ್ರಸ್ತಾವನೆ ಬಗ್ಗೆ ನಾವು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸೆ.19 ರಂದು ನಡೆಯಲಿರುವ ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬುಗ್ತಿ ಮಾಹಿತಿ ನೀಡಿದ್ದಾರೆ.

ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ(ಬಿಆರ್ ಪಿ) ಯ ಸ್ಥಾಪಕರಾಗಿರುವ ಬ್ರಹಮ್‌ದಾಗ್ ಬುಗ್ತಿ, 2006 ರಲ್ಲಿ ಅವರ ಅಜ್ಜ ಅಕ್ಬರ್ ಬುಗ್ತಿ ಅವರ ಹತ್ಯೆಯ ನಂತರ ಸ್ವಿಟ್ಜರ್ಲ್ಯಾಂಡ್ ನಲ್ಲಿ ವಾಸವಾಗಿದ್ದಾರೆ. 2006 ರಿಂದ ಮೊದಲ ನಾಲ್ಕು ವರ್ಷ ಅಫ್ಘಾನಿಸ್ತಾನದಲ್ಲಿ ಬುಗ್ತಿ ಆಶ್ರಯ ಪಡೆದಿದ್ದರು. ನಂತರ ಸ್ವಿಟ್ಜರ್ಲ್ಯಾಂಡ್  ನಲ್ಲಿ ರಾಜಕೀಯ ಆಶ್ರಯ ಸಿಕ್ಕ ನಂತರ ಕುಟುಂಬ ಸಮೇತ ಅಲ್ಲಿಗೆ ತೆರಳಿದ್ದರು.    

ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಬ್ರಹಮ್‌ದಾಗ್ ಬುಗ್ತಿ ಅವರ ಸಹಚರ- ಬೆಂಬಲಿಗರಿಗೆ ಭಾರತ ಸರ್ಕಾರ ಪೌರತ್ವ ನೀಡಲು ಸಿದ್ಧತೆ ನಡೆಸಿದೆ ಎಂಬ ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಬುಗ್ತಿ ಪ್ರತಿಕ್ರಿಯೆ ನೀಡಿದ್ದು, ಅವಕಾಶ ಸಿಕ್ಕರೆ ಬಲೂಚಿಸ್ತಾನದ ಜನತೆಗಾಗಿ ಖಂಡಿತ ಭಾರತಕ್ಕೆ ಹೋಗುವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT