ಬ್ರಹಮ್‌ದಾಗ್ ಬುಗ್ತಿ 
ದೇಶ

ಅವಕಾಶ ಸಿಕ್ಕರೆ ಖಂಡಿತ ಭಾರತದಲ್ಲಿ ಆಶ್ರಯ ಪಡೆಯುವೆ: ಬಲೂಚ್ ಸ್ವಾತಂತ್ರ್ಯ ಹೋರಾಟಗಾರ ಬುಗ್ತಿ

ಬಲೂಚಿಸ್ತಾನದ ಪ್ರತ್ಯೇಕತವಾದಿಗಳಿಗೆ ಭಾರತದಲ್ಲಿ ಆಶ್ರಯ ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ವರದಿಗಳು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ಮೂಡಿಸಿದೆ.

ನವದೆಹಲಿ: ಪಾಕಿಸ್ತಾನದಿಂದ ಪ್ರತ್ಯೇಕತೆ ಬಯಸುತ್ತಿರುವ ಬಲೂಚಿಸ್ತಾನದ ಪ್ರತ್ಯೇಕತವಾದಿಗಳಿಗೆ ರಾಜಕೀಯ ಬೆಂಬಲ ಹಾಗೂ ಭಾರತದಲ್ಲಿ ಆಶ್ರಯ ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ವರದಿಗಳು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ಮೂಡಿಸಿದೆ.

ಭಾರತ ಸರ್ಕಾರದ ಉದ್ದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ, ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ನಾಯಕ ಬ್ರಹಮ್‌ದಾಗ್ ಬುಗ್ತಿ, "ಭಾರತದಲ್ಲಿ ನೆಲೆಸಲು ಅವಕಾಶ ಸಿಕ್ಕರೆ ನನ್ನ ಜನರಿಗಾಗಿ ಖಂಡಿತಾ ಹೋಗುವೆ ಎಂದು ಹೇಳಿದ್ದಾರೆ. ಭಾರತ ಸರ್ಕಾರದ ಆಶ್ರಯದ ಪ್ರಸ್ತಾವನೆ ಬಗ್ಗೆ ನಾವು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸೆ.19 ರಂದು ನಡೆಯಲಿರುವ ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬುಗ್ತಿ ಮಾಹಿತಿ ನೀಡಿದ್ದಾರೆ.

ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ(ಬಿಆರ್ ಪಿ) ಯ ಸ್ಥಾಪಕರಾಗಿರುವ ಬ್ರಹಮ್‌ದಾಗ್ ಬುಗ್ತಿ, 2006 ರಲ್ಲಿ ಅವರ ಅಜ್ಜ ಅಕ್ಬರ್ ಬುಗ್ತಿ ಅವರ ಹತ್ಯೆಯ ನಂತರ ಸ್ವಿಟ್ಜರ್ಲ್ಯಾಂಡ್ ನಲ್ಲಿ ವಾಸವಾಗಿದ್ದಾರೆ. 2006 ರಿಂದ ಮೊದಲ ನಾಲ್ಕು ವರ್ಷ ಅಫ್ಘಾನಿಸ್ತಾನದಲ್ಲಿ ಬುಗ್ತಿ ಆಶ್ರಯ ಪಡೆದಿದ್ದರು. ನಂತರ ಸ್ವಿಟ್ಜರ್ಲ್ಯಾಂಡ್  ನಲ್ಲಿ ರಾಜಕೀಯ ಆಶ್ರಯ ಸಿಕ್ಕ ನಂತರ ಕುಟುಂಬ ಸಮೇತ ಅಲ್ಲಿಗೆ ತೆರಳಿದ್ದರು.    

ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಬ್ರಹಮ್‌ದಾಗ್ ಬುಗ್ತಿ ಅವರ ಸಹಚರ- ಬೆಂಬಲಿಗರಿಗೆ ಭಾರತ ಸರ್ಕಾರ ಪೌರತ್ವ ನೀಡಲು ಸಿದ್ಧತೆ ನಡೆಸಿದೆ ಎಂಬ ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಬುಗ್ತಿ ಪ್ರತಿಕ್ರಿಯೆ ನೀಡಿದ್ದು, ಅವಕಾಶ ಸಿಕ್ಕರೆ ಬಲೂಚಿಸ್ತಾನದ ಜನತೆಗಾಗಿ ಖಂಡಿತ ಭಾರತಕ್ಕೆ ಹೋಗುವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT