ಸಂಗ್ರಹ ಚಿತ್ರ 
ದೇಶ

ಪೆಲೆಟ್ ಗನ್'ಗೆ 15 ವರ್ಷದ ಬಾಲಕ ಸಾವು: ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ

ಶ್ರೀನಗರದ ಹರ್ವಾನ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಭದ್ರತಾ ಪಡೆಗಳು ನಡೆಸಿದ ಪೆಲೆಟ್ ಗನ್ ದಾಳಿಗೆ 15 ವರ್ಷದ ಬಾಲಕನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ...

ಶ್ರೀನಗರ: ಶ್ರೀನಗರದ ಹರ್ವಾನ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಭದ್ರತಾ ಪಡೆಗಳು ನಡೆಸಿದ ಪೆಲೆಟ್ ಗನ್ ದಾಳಿಗೆ 15 ವರ್ಷದ ಬಾಲಕನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಮತ್ತೆ ಕಾಶ್ಮೀರದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಹರ್ವಾನ್ ಪ್ರದೇಶದಲ್ಲಿ ಗುಂಪೊಂದು ಪ್ರತಿಭಟನೆ ನಡೆಸಲು ಆರಂಭಿಸಿತ್ತು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಹಿಂಸಾಚಾರ ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದ ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಲು ಪೆಲೆಟ್ ಗನ್ ಗಳನ್ನು ಬಳಸಲು ಆರಂಭಿಸಿದ್ದರು. ಇದರಂತೆ ಗುಂಡು ತಗುಲಿ 15 ವರ್ಷದ ಮೊಮಿನ್ ಅಲ್ತಾಫ್ ಎಂಬ ಬಾಲಕ ನಿನ್ನೆ ಸಂಜೆ ಮೃತಪಟ್ಟಿದ್ದ.

ಜನರಿದ್ದ ಸ್ಥಳದಿಂದ ಬಹಳ ದೂರದಿಂದ ಪೊಲೀಸರೂ ಗುಂಡು ಹಾರಿಸಿದ್ದರು, ಬಾಲಕ ಮೃತಪಡಲು ಸಾಧ್ಯವಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕನ ಸಾವಿಗೆ ಇದೀಗ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, ಬಾಲಕನ ಅಂತಿಮ ಸಂಸ್ಕಾರದ ವೇಳೆ ಜನರು ಪ್ರತಿಭಟನೆ ನಡೆಸಲು ಆರಂಭಿಸಿದ್ದಾರೆ. ಅಲ್ಲದೆ, ಭದ್ರತಾ ಪಡೆಗಳ ಮೇಲೆ ಕಲ್ಲುತೂರಾಟವನ್ನು ನಡೆಸಿದ್ದಾರೆ. ಇದರಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯುವನ್ನು ಪ್ರಯೋಗಿಸಿದರು ಎಂದು ಪೊಲೀಸ್ ವಕ್ತಾರ ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಮತ್ತೆ ಹರ್ವಾನ್ ಸೇರಿದಂತೆ ಶ್ರೀನಗರದ ಹಲವೆಡೆ ಕರ್ಫ್ಯೂ ಮಾದರಿಯ ನಿರ್ಬಂಧವನ್ನು ಹೇರಲಾಗಿದೆ. ಭದ್ರತಾ ಪಡೆಗಳು ನಿರ್ಬಂಧ ಹೇರಿದ್ದರು, ಕೆಲ ಜನರು ಬಾಲಕನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT