ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ಡಿಸಿಎಂ ಸಿಸೋಡಿಯಾ (ಸಂಗ್ರಹ ಚಿತ್ರ) 
ದೇಶ

ಪ್ರವಾಸದಿಂದ ದೆಹಲಿಗೆ ವಾಪಸಾಗಿ: ದೆಹಲಿ ಉಪಮುಖ್ಯಮಂತ್ರಿಗೆ ಲೆಫ್ಟಿನೆಂಟ್ ಗವರ್ನರ್

ಫಿನ್ ಲ್ಯಾಂಡ್ ಪ್ರವಾಸದಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೂಡಲೇ ದೆಹಲಿಗೆ ವಾಪಸ್ ಆಗಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹೇಳಿದ್ದಾರೆ.

ನವದೆಹಲಿ: ಫಿನ್ ಲ್ಯಾಂಡ್ ಪ್ರವಾಸದಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೂಡಲೇ ದೆಹಲಿಗೆ ವಾಪಸ್ ಆಗಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್  ನಜೀಬ್ ಜಂಗ್ ಹೇಳಿದ್ದಾರೆ.

ದೆಹಲಿಯಲ್ಲಿ ಮಿತಿ ಮೀರಿರುವ ಸಾಂಕ್ರಾಮಿಕ ರೋಗಗಳೊಂದಿಗೆ ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿದ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲು ದೆಹಲಿ  ಆರೋಗ್ಯ ಇಲಾಖೆ ವಿಫಲವಾಗುತ್ತಿದ್ದು, ಇದೇ ಕಾರಣಕ್ಕೆ ಕೂಡಲೇ ದೆಹಲಿಗೆ ಆಗಮಿಸಿ ಪರಿಸ್ಥಿತಿ ಅವಲೋಕಿಸುವಂತೆ ನಜೀಬ್ ಜಂಗ್ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯ ನಿಮಿತ್ತ ಶಸ್ತ್ರ ಚಿಕಿತ್ಸೆ ಒಳಗಾಗಲಿದ್ದು, ಅವರ ಅನುಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ದೆಹಲಿ  ಆಡಳಿತ ಯಂತ್ರದ ಜವಾಬ್ದಾರಿ ಇದೆ. ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಶಿಕ್ಷಣಇಲಾಖೆಯ ಜವಾಬ್ದಾರಿ ಕೂಡ ಸಿಸೋಡಿಯಾ ಮೇಲಿದ್ದು, ಫಿನ್ ಲ್ಯಾಂಡ್ ಶಿಕ್ಷಣ ವ್ಯವಸ್ಥೆಯ ಕುರಿತ  ಅಧ್ಯಯನಕ್ಕಾಗಿ ಅವರು ಆ ದೇಶಕ್ಕೆ ಹಾರಿದ್ದರು.

ಇದೀಗ ದೆಹಲಿಯಲ್ಲಿ ಡೆಂಗ್ಯೂ, ಚಿಕುನ್ ಗುನ್ಯಾ ಹಾವಳಿ ಮಿತಿ ಮೀರಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗ ಪೀಡಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ  ವರೆಗೂ ದೆಹಲಿಯಲ್ಲಿ ಸುಮಾರು 2, 800ಕ್ಕೂ ಅಧಿಕ ಮಂದಿಯಲ್ಲಿ ರೋಗಲಕ್ಷಣಗಳು ಕಾಣಿಸಕೊಂಡಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಇದೇ ಕಾರಣದಿಂದಾಗಿ ವಿಫಕ್ಷಗಳಾದ  ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಮ್ ಆದ್ಮಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದು, ಒಂದೆಡೆ ದೆಹಲಿ ಜನತೆ ರೋಗಗಳಿಂದ ಬಾಧೆ ಪಡುತ್ತಿದ್ದರೆ, ಡಿಸಿಎಂ ಸಿಸೋಡಿಯಾ ಫಿನ್ ಲ್ಯಾಂಡ್  ನಲ್ಲಿ ರಜೆಪ್ರವಾಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT