ನೀರಿನಲ್ಲಿ ವಿದ್ಯಾರ್ಥಿಗಳ ಸಾವು 
ದೇಶ

ಸೆಲ್ಫಿ ತೆಗೆಯುವ ವೇಳೆ ಆಯ ತಪ್ಪಿ ಜಲಾಶಯಕ್ಕೆ ಬಿದ್ದು 5 ವಿದ್ಯಾರ್ಥಿಗಳು ನೀರುಪಾಲು

ವರಂಗಲ್ ನ ವಾಗ್ದೇವಿ ಎಂಜಿನಿಯರಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ಧರ್ಮಸಾಗರ್ ಜಲಾಶಯ ವೀಕ್ಷಣೆಗೆ ತೆರಳಿದ್ದು ಸೆಲ್ಫಿ ತೆಗೆದುಕೊಳ್ಳುವಾಗ ಐವರು...

ವರಂಗಲ್: ವರಂಗಲ್ ನ ವಾಗ್ದೇವಿ ಎಂಜಿನಿಯರಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ಧರ್ಮಸಾಗರ್ ಜಲಾಶಯ ವೀಕ್ಷಣೆಗೆ ತೆರಳಿದ್ದು ಸೆಲ್ಫಿ ತೆಗೆದುಕೊಳ್ಳುವಾಗ ಐವರು ವಿದ್ಯಾರ್ಥಿಗಳು ಕಾಲು ಜಾರಿ ಜಲಾಶಯಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. 
ಸೆಲ್ಫಿ ತೆಗೆದುಕೊಳ್ಳುವ ಆತುರದಲ್ಲಿ ಶ್ರಾವ್ಯಾರೆಡ್ಡಿ, ಶಿವಸಾಯಿ, ಶಿವ ಸಾಯಿಕೃಷ್ಣ, ವಿನೂತ್ನ, ಸಾಗರ್ ಜಲಾಶಯಕ್ಕೆ ಬಿದ್ದಿದ್ದಾರೆ. ಆದರೆ ಇವರೊಂದಿಗೆ ತೆರಳಿದ್ದ ರಮ್ಯ ಪ್ರತ್ಯೂಷ ಮಾತ್ರ ಸ್ವಲ್ಪ ದೂರದಲ್ಲಿ ನಿಂತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಸಹಪಾಠಿಗಳು ಜಲಾಶಯಕ್ಕೆ ಬೀಳುತ್ತಿದ್ದಂತೆ ರಮ್ಯ ಪ್ರತ್ಯೂಷ ಜೋರಾಗಿ ಕೂಗಿಕೊಂಡಿದ್ದಾಳೆ. ಈ ವೇಳೆ ಅಲ್ಲೆ ಗದ್ದೆಗಳಿಗೆ ನೀರು ಕಟ್ಟುತ್ತಿದ್ದ ರೈತರು ಜಲಾಶಯದ ಬಳಿಗೆ ಬರುವಷ್ಟರಲ್ಲಿ ಐವರು ನೀರಿನಲ್ಲಿ ಮುಳುಗಿ ಹೋಗಿದ್ದಾರೆ. 
ಇದರಲ್ಲಿ ಇಬ್ಬರು ವಿದ್ಯಾರ್ಥಿನಿಗಳ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಇನ್ನು ಮೂರು ಮಂದಿ ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಪೊಲೀಸರು ಈಜುಗಾರರೊಂದಿಗೆ ಸೇರಿ ಹುಡುಕಾಟ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT