ರಾಹುಲ್ ಗಾಂಧಿ 
ದೇಶ

ಇಂಡಿಗೋ ವಿಮಾನದ ಪೈಲಟ್ ಪರವಾನಗಿ, ಇಂಧನ ಪರಿಶೀಲನೆಗೆ ಬೇಡಿಕೆ ಇಟ್ಟಿದ್ದ ರಾಹುಲ್ ಗಾಂಧಿ ಭದ್ರತಾ ಪಡೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆ ಇಂಡಿಗೋ ವಿಮಾನದ ಪೈಲಟ್ ಗಳ ಪರವಾನಗಿಯನ್ನು ಪರಿಶೀಲನೆ ನಡೆಸಲು ಮುಂದಾಗಿದ್ದ ಬಗ್ಗೆ ಮಾಹಿತಿ ಬಹಿರಂಗವಾಗಿದೆ

ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆ ಇಂಡಿಗೋ ವಿಮಾನದ ಪೈಲಟ್ ಗಳ ಪರವಾನಗಿಯನ್ನು ಹಾಗೂ ವಿಮಾನಕ್ಕೆ ಬಳಸಲಾಗುವ ಇಂಧನದ ಮಾದರಿಯನ್ನು ಪರಿಶೀಲನೆ ನಡೆಸಲು ಮುಂದಾಗಿದ್ದ ಮಾಹಿತಿ ಬಹಿರಂಗವಾಗಿದೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸೆ.14 ರಂದು ರಾಹುಲ್ ಗಾಂಧಿ ವಾರಾಣಸಿಗೆ ಇಂಡಿಗೋ ವಿಮಾನದಲ್ಲಿ ತೆರಳಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಭದ್ರತಾ ಸಿಬ್ಬಂದಿಗಳು  ಇಂಡಿಗೋ ವಿಮಾನದ ಪೈಲಟ್ ಗಳ ಪರವಾನಗಿಯನ್ನು ಹಾಗೂ ವಿಮಾನಕ್ಕೆ ಬಳಸಲಾಗುವ ಇಂಧನದ ಮಾದರಿಯನ್ನು ಪರಿಶೀಲನೆ ನಡೆಸಲು ಮುಂದಾಗಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.

ವಿಶೇಷ ಭದ್ರತಾ ಪಡೆ (ಎಸ್ ಪಿಜಿ)ಯ ಬೇಡಿಕೆಯನ್ನು ನಿರಾಕರಿಸಿದ್ದ ಪೈಲಟ್ ಗಳು, ಎಸ್ ಪಿಜಿ ಗಳಿಗೆ ಪೈಲಟ್ ಗಳ ಪರವಾನಗಿ ಕೇಳುವ ಅಧಿಕಾರವಿಲ್ಲವಾದ್ದರಿಂದ ವಿಮಾನಯಾನ ಸಂಸ್ಥೆ ಮೂಲಕವೇ ಪರವಾನಗಿಯನ್ನು ಪರಿಶೀಲಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ ಇಂಧನದ ಮಾದರಿಯನ್ನು ಪರಿಶೀಲಿಸಲು ವಿಶೇಷ ಭದ್ರತಾ ಪಡೆ ಸಿಬ್ಬಂದಿಗಳಿಗೆ ಅವಕಾಶ ನೀಡಲಾಗಿದೆ.
ವಿಮಾನಕ್ಕೆ ಬಳಕೆ ಮಾಡುವ ಇಂಧನದ ಮಾದರಿಯನ್ನು ಪರಿಶೀಲಿಸಿದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ 45 ನಿಮಿಷಗಳು ತಡವಾಗಿ ಟೇಕ್ ಆಫ್ ಆಗಿದೆ ಎಂದು ತಿಳಿದುಬಂದಿದೆ. ಬಹುಶಃ ಹಿಂದೆಂದೂ ಸಹ ವಿಶೇಷ ಭದ್ರತಾ ಸಿಬ್ಬಂದಿಗಳು  ಪೈಲಟ್ ಗಳ ಪರವಾನಗಿ ಪರಿಶೀಲನೆ ನಡೆಸಲು ಕೇಳಿದ ಉದಾಹರಣೆಗಳಿಲ್ಲ. ವಿಐಪಿ ಗಳಿಗಾಗಿ ಏರ್ ಇಂಡಿಯಾ ಅತ್ಯುತ್ತಮ ಪೈಲಟ್ ಗಳನ್ನೇ ನಿಯೋಜಿಸುವುದು ಶಿಷ್ಟಾಚಾರವಾಗಿದೆ. ಆದರೆ ಐಐಪಿಗಳು ವಾಣಿಜ್ಯ ವಿಮಾನಗಳನ್ನು ಬಳಸಿದಾಗ ಪೈಲಟ್ ಗಳ ಪರವಾನಗಿ ಪರಿಶೀಲನೆ ನಡೆಸಿದ ಉದಾಹರಣೆಗಳಿಲ್ಲ ಎಂದು ಇಂಡಿಗೋ ವಿಮಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ರಾಹುಲ್ ಗಾಂಧಿಯ ಎಸ್ ಪಿಜಿ ತಂಡ ಪೈಲಟ್ ಗಳ ಪರವಾನಗಿ ಪರಿಶೀಲನೆ ನಡೆಸಲು ಮುಂದಾಗಿದ್ದ ಘಟನೆ ಅಚ್ಚರಿ ಮೂಡಿಸಿದೆ ಎಂದು ವಿಮಾನಯಾನ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT