ಮುಲಾಯಂ ಸಿಂಗ್ ಯಾದವ್, ಅಮರ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಮರ್ ಸಿಂಗ್ ನೇಮಕ

ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್...

ನವದೆಹಲಿ: ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪಕ್ಷದೊಳಗೆ ಬಿಕ್ಕಟ್ಟು ಭುಗಿಲೇಳಲು ಅಮರ್ ಸಿಂಗ್ ಕಾರಣ ಎಂದು ಪಕ್ಷದ ನಾಯಕರು ಆರೋಪಿಸಿದ್ದರು. ತಮ್ಮ ಸ್ವಹಸ್ತಾಕ್ಷರದಲ್ಲಿ ಬರೆದ ಪತ್ರದ ಮೂಲಕ ಸ್ವತಃ ಮುಲಾಯಂ ಸಿಂಗ್ ಅವರೇ ಈ ಘೋಷಣೆ ಮಾಡಿದ್ದಾರೆ.
ಕಳೆದ ವಾರ ಶಿವಪಾಲ್ ಯಾದವ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಲಾಯಂ ಸಿಂಗ್ ಯಾದವ್ ನೇಮಿಸಿದ ನಂತರ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿ ಯಾದವ್ ಕುಟುಂಬದ ಕಲಹ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಮಧ್ಯೆ ಅಮರ್ ಸಿಂಗ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ