ಮುಲಾಯಂ ಸಿಂಗ್ ಯಾದವ್, ಅಮರ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಮರ್ ಸಿಂಗ್ ನೇಮಕ

ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್...

ನವದೆಹಲಿ: ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪಕ್ಷದೊಳಗೆ ಬಿಕ್ಕಟ್ಟು ಭುಗಿಲೇಳಲು ಅಮರ್ ಸಿಂಗ್ ಕಾರಣ ಎಂದು ಪಕ್ಷದ ನಾಯಕರು ಆರೋಪಿಸಿದ್ದರು. ತಮ್ಮ ಸ್ವಹಸ್ತಾಕ್ಷರದಲ್ಲಿ ಬರೆದ ಪತ್ರದ ಮೂಲಕ ಸ್ವತಃ ಮುಲಾಯಂ ಸಿಂಗ್ ಅವರೇ ಈ ಘೋಷಣೆ ಮಾಡಿದ್ದಾರೆ.
ಕಳೆದ ವಾರ ಶಿವಪಾಲ್ ಯಾದವ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಲಾಯಂ ಸಿಂಗ್ ಯಾದವ್ ನೇಮಿಸಿದ ನಂತರ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿ ಯಾದವ್ ಕುಟುಂಬದ ಕಲಹ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಮಧ್ಯೆ ಅಮರ್ ಸಿಂಗ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್