ನರೇಂದ್ರ ಮೋದಿ, ರಾಹುಲ್ ಗಾಂಧಿ 
ದೇಶ

ಮೋದಿ ಬರೀ ಸೆಲ್ಫೀ ಮತ್ತು ಭರವಸೆ ಕೊಡುವ ಯಂತ್ರ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸೆಲ್ಫೀ ಮತ್ತು ಭರವಸೆ ನೀಡುವ ಯಂತ್ರ. ಅಚ್ಛೇ ದಿನ ಭರವಸೆ ಬಡವರಿಗಲ್ಲ, ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಎಂದು ಕಾಂಗ್ರೆಸ್...

ಒರಯ್(ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸೆಲ್ಫೀ ಮತ್ತು ಭರವಸೆ ನೀಡುವ ಯಂತ್ರ. ಅಚ್ಛೇ ದಿನ ಭರವಸೆ ಬಡವರಿಗಲ್ಲ, ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ಚುನಾವಣಾ ರ್ಯಾಲಿ ಡಿಯೋರಿಯದಿಂದ ದಿಲ್ಲಿ ಕಿಸಾನ್ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಹಲವಾರು ಭರವಸೆಗಳನ್ನು ನೀಡಿದ್ದರು. ಈ ಪೈಕಿ ಸ್ವಿಸ್ ಬ್ಯಾಂಕಿನಲ್ಲಿರುವ ಹಣವನ್ನು ಭಾರತಕ್ಕೆ ವಾಪಸ್ ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಜಮಾ ಮಾಡುವುದು. ರೈತರಿಗೆ ನ್ಯಾಯಬೆಲೆ, 2 ಕೋಟಿ ಉದ್ಯೋಗ ಸೃಷ್ಠಿ ಹೀಗೆ ಹಲವಾರು ಭರವಸೆಗಳನ್ನು ಚುನಾವಣೆ ಪೂರ್ವ ಹಾಗೂ ಪ್ರಧಾನಿಯಾದ ಬಳಿಕ ನೀಡಿದ್ದು ಅವುಗಳನ್ನು ಪೂರೈಸಲು ಆಗಿಲ್ಲ ಎಂದು ಆರೋಪಿಸಿದ್ದಾರೆ.

ಮೋದಿ ಅವರು ಕೋಮುಗಲಭೆಗಳಿಲ್ಲ ರಾಜ್ಯಗಳಲ್ಲಿ ಕೋಮುವಾದವನ್ನು ಹರಡುತ್ತಿದ್ದಾರೆ. ಹಿಂದು, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ರಿರುವ ಶಾಂತಿಯುತ ದೇಶದಲ್ಲಿ ಕೋಮುವಾದವನ್ನು ಸೃಷ್ಠಿಸುವುದು ಮೋದಿ ಅವರ ಗುರಿಯಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಈ ಯಾತ್ರೆ ಮಾಡುತ್ತಿರುವ ಸಂದರ್ಭದಲ್ಲಿ ಮಂದಿರ-ಮಸೀದಿಗಳು ಎದುರು ಬದುರಿದ್ದು, ಇಲ್ಲಿ ಜನರು ಒಟ್ಟಾಗಿ ಬಾಳುತ್ತಿದ್ದಾರೆ. ಆದರೆ ಮೋದಿ ಬಂದ ಬಳಿಕ ಹಿಂದೂಗಳು ಮುಸ್ಲಿಂರೊಟ್ಟಿಗೆ ಜಗಳ ಮಾಡುವಂತಾಗಿದೆ ಎಂದರು. ಇನ್ನು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ 10 ವರ್ಷಗಳ ಕಾಲ ಅಧಿಕಾರ ನಡೆಸಿತ್ತು. ಈ ವೇಳೆ ಜಾಟ್ ಹಾಗೂ ಜಾಟ್ ಅಲ್ಲದ ಸಮುದಾಯದವರಲ್ಲಿ ಯಾವುದೇ ಗಲಭೆಗಳು ಇರಲಿಲ್ಲ. ಆದರೆ ಇದೀಗ ಹರಿಯಾಣ ಗಲಭೆ ಪೀಡಿತವಾಗಿದೆ ಎಂದರು.

ಭಾರತಕ್ಕೆ ಅಚ್ಛೇ ದಿನ್ ಬಂದಿದೆ ಆದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರು 12 ರಿಂದ 15 ಕೈಗಾರಿಕೋಧ್ಯಮ ಸ್ನೇಹಿತರಿಗೆ ಮಾತ್ರ. ಆದರೆ ಬಡವರು ಮತ್ತು ದುರ್ಬಲರು ಗಲಭೆಗಳಿಂದ ನಲುಗುತ್ತಿದ್ದಾರೆ ಎಂದು ರಾಹುಲ್ ಮೋದಿ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT