ನರೇಂದ್ರ ಮೋದಿ, ರಾಹುಲ್ ಗಾಂಧಿ 
ದೇಶ

ಮೋದಿ ಬರೀ ಸೆಲ್ಫೀ ಮತ್ತು ಭರವಸೆ ಕೊಡುವ ಯಂತ್ರ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸೆಲ್ಫೀ ಮತ್ತು ಭರವಸೆ ನೀಡುವ ಯಂತ್ರ. ಅಚ್ಛೇ ದಿನ ಭರವಸೆ ಬಡವರಿಗಲ್ಲ, ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಎಂದು ಕಾಂಗ್ರೆಸ್...

ಒರಯ್(ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸೆಲ್ಫೀ ಮತ್ತು ಭರವಸೆ ನೀಡುವ ಯಂತ್ರ. ಅಚ್ಛೇ ದಿನ ಭರವಸೆ ಬಡವರಿಗಲ್ಲ, ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ಚುನಾವಣಾ ರ್ಯಾಲಿ ಡಿಯೋರಿಯದಿಂದ ದಿಲ್ಲಿ ಕಿಸಾನ್ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಹಲವಾರು ಭರವಸೆಗಳನ್ನು ನೀಡಿದ್ದರು. ಈ ಪೈಕಿ ಸ್ವಿಸ್ ಬ್ಯಾಂಕಿನಲ್ಲಿರುವ ಹಣವನ್ನು ಭಾರತಕ್ಕೆ ವಾಪಸ್ ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಜಮಾ ಮಾಡುವುದು. ರೈತರಿಗೆ ನ್ಯಾಯಬೆಲೆ, 2 ಕೋಟಿ ಉದ್ಯೋಗ ಸೃಷ್ಠಿ ಹೀಗೆ ಹಲವಾರು ಭರವಸೆಗಳನ್ನು ಚುನಾವಣೆ ಪೂರ್ವ ಹಾಗೂ ಪ್ರಧಾನಿಯಾದ ಬಳಿಕ ನೀಡಿದ್ದು ಅವುಗಳನ್ನು ಪೂರೈಸಲು ಆಗಿಲ್ಲ ಎಂದು ಆರೋಪಿಸಿದ್ದಾರೆ.

ಮೋದಿ ಅವರು ಕೋಮುಗಲಭೆಗಳಿಲ್ಲ ರಾಜ್ಯಗಳಲ್ಲಿ ಕೋಮುವಾದವನ್ನು ಹರಡುತ್ತಿದ್ದಾರೆ. ಹಿಂದು, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ರಿರುವ ಶಾಂತಿಯುತ ದೇಶದಲ್ಲಿ ಕೋಮುವಾದವನ್ನು ಸೃಷ್ಠಿಸುವುದು ಮೋದಿ ಅವರ ಗುರಿಯಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಈ ಯಾತ್ರೆ ಮಾಡುತ್ತಿರುವ ಸಂದರ್ಭದಲ್ಲಿ ಮಂದಿರ-ಮಸೀದಿಗಳು ಎದುರು ಬದುರಿದ್ದು, ಇಲ್ಲಿ ಜನರು ಒಟ್ಟಾಗಿ ಬಾಳುತ್ತಿದ್ದಾರೆ. ಆದರೆ ಮೋದಿ ಬಂದ ಬಳಿಕ ಹಿಂದೂಗಳು ಮುಸ್ಲಿಂರೊಟ್ಟಿಗೆ ಜಗಳ ಮಾಡುವಂತಾಗಿದೆ ಎಂದರು. ಇನ್ನು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ 10 ವರ್ಷಗಳ ಕಾಲ ಅಧಿಕಾರ ನಡೆಸಿತ್ತು. ಈ ವೇಳೆ ಜಾಟ್ ಹಾಗೂ ಜಾಟ್ ಅಲ್ಲದ ಸಮುದಾಯದವರಲ್ಲಿ ಯಾವುದೇ ಗಲಭೆಗಳು ಇರಲಿಲ್ಲ. ಆದರೆ ಇದೀಗ ಹರಿಯಾಣ ಗಲಭೆ ಪೀಡಿತವಾಗಿದೆ ಎಂದರು.

ಭಾರತಕ್ಕೆ ಅಚ್ಛೇ ದಿನ್ ಬಂದಿದೆ ಆದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರು 12 ರಿಂದ 15 ಕೈಗಾರಿಕೋಧ್ಯಮ ಸ್ನೇಹಿತರಿಗೆ ಮಾತ್ರ. ಆದರೆ ಬಡವರು ಮತ್ತು ದುರ್ಬಲರು ಗಲಭೆಗಳಿಂದ ನಲುಗುತ್ತಿದ್ದಾರೆ ಎಂದು ರಾಹುಲ್ ಮೋದಿ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್

ಉದ್ಯಮಿಗೆ ಬ್ಲಾಕ್ ಮೇಲ್: ನಟಿ ಕೃಷಿ ತಾಪಂಡಗೆ ನೋಟಿಸ್, ಸ್ನೇಹಿತನ ಬಂಧನ!

ಸೂರಜ್‌ಕುಂಡ್ ಸ್ವಿಂಗ್ ದುರಂತ: ಆಪರೇಟರ್, ಮಾಲೀಕರ ಬಂಧನ; ಸರ್ಕಾರಿ ಗೌರವಗಳೊಂದಿಗೆ 'ಹೀರೋ' ಇನ್ಸ್ ಪೆಕ್ಟರ್ ಅಂತ್ಯ ಸಂಸ್ಕಾರ!

ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದ: 72 ಕೋಟಿ ರೈತರ ಪಾಲಿಗೆ ಮರಣಶಾಸನ- ಸಿಎಂ ಸಿದ್ದರಾಮಯ್ಯ

SCROLL FOR NEXT