ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ 
ದೇಶ

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ

ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌.....

ಚಂಡೀಗಢ: ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಲು ಆಗ್ರಹಿಸಿದ್ದಾರೆ.

ಉರಿಯಲ್ಲಿ ಉಗ್ರ ದಾಳಿ ನಡೆದಿರುವುದರ ಬಗ್ಗೆ ಈಗಾಗಲೇ ಸಾಕಷ್ಟು ಹೇಳಿಕೆಗಳು ಬಂದಿವೆ. ಆದರೆ ಪಾಕಿಸ್ತಾನದ ವಿಷಯವಾಗಿ ಏನನ್ನೂ ಮಾಡಲಾಗಿಲ್ಲ ಎಂದು ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಗುರುತಿಸಬೇಕು ಎಂದು ಹೇಳಿದ್ದಾರೆ. ಭಯೋತ್ಪಾದನೆಯನ್ನು ಖಂಡಿಸುವ ಹೇಳಿಕೆಗಳು ಸಾಕಾಗುವುದಿಲ್ಲ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಲು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಸಿಗುತ್ತಿರುವ ಹಣಕಾಸಿನ ನೆರವನ್ನು ಸ್ಥಗಿತಗೊಳಿಸಿದರೆ ಮಾತ್ರ ಪಾಕ್ ಭಯೋತ್ಪಾದನೆಯನ್ನು ಬಿಡುತ್ತದೆ ಎಂದು ರಾಮ್ ರಹೀಮ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT