ದೇಶ

ಉರಿ ಉಗ್ರ ದಾಳಿಯ ಬೆನ್ನಲ್ಲೇ ಕದನ ವಿರಾಮ ಉಲ್ಲಂಘಿಸಿದ ಪಾಕ್

Lingaraj Badiger
ಶ್ರೀನಗರ: 18 ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಉರಿ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಉರಿ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಮಂಗಳವಾರ ಅಪ್ರಚೋದಿತ ದಾಳಿ ನಡೆಸಿದ್ದಾರೆ.
ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯಿಂದ ಸಣ್ಣ ಮತ್ತು ಆಟೋಮ್ಯಾಟಿಕ್ ಮಷಿನ್ ಗಳ ಮೂಲಕ ಗುಂಡಿನ ದಾಳಿ ನಡೆಸಿದ್ದಾರೆ. ಯಾವುದೇ ಪ್ರಾಣ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಆದರೆ ಸದ್ಯ ಗುಂಡಿನ ದಾಳಿ ಸ್ಥಗಿತಗೊಂಡಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಪಾಕ್ ಸೈನಿಕರು ಸುಮಾರು 20 ನಿಮಿಷಗಳ ಕಾಲ ನಿರಂತರವಾಗಿ 20 ಸುತ್ತು ಗುಂಡು ಹಾರಿಸುವ ಮೂಲಕ 2003ರ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ.
ಕಳೆದ ಭಾನುವಾರ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ 18 ಯೋಧರು ಹುತಾತ್ಮರಾಗಿದ್ದರು. ಅಲ್ಲದೆ 12ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
SCROLL FOR NEXT