ಚೂರಿ ಇರಿತ 
ದೇಶ

ದೆಹಲಿಯಲ್ಲಿ ಸಾರ್ವಜನಿಕವಾಗಿ ಯುವತಿಗೆ 22 ಬಾರಿ ಇರಿದು ಕೊಂದ ಕ್ರೂರಿ

ದೆಹಲಿಯಲ್ಲಿ ಸಾರ್ವಜನಿಕರೆದುರೆ 21 ವರ್ಷದ ಯುವತಿಗೆ ಯುವಕನೊಬ್ಬ ಬರೋಬ್ಬರಿ 22 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ...

ನವದೆಹಲಿ: ದೆಹಲಿಯಲ್ಲಿ ಸಾರ್ವಜನಿಕರೆದುರೆ 21 ವರ್ಷದ ಯುವತಿಗೆ ಯುವಕನೊಬ್ಬ ಬರೋಬ್ಬರಿ 22 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

21 ವರ್ಷದ ಕರುಣಾ ಶಿಕ್ಷಕಿಯಾಗಿದ್ದು ಕಳೆದ ಒಂದು ವರ್ಷದಿಂದ 34 ವರ್ಷದ ಸುರೇಂದರ್ ಆಕೆಯನ್ನು ಹಿಂಬಾಲಿಸುವುದು ಹಾಗೂ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಕರುಣಾಳನ್ನು ಹಿಂಬಾಲಿಸಿಕೊಂಡು ಬಂದ ಸುರೇಂದರ್ ಆಕೆಗೆ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಈ ವೇಳೆ ಘಟನಾ ಸ್ಥಳದಲ್ಲಿ ಹತ್ತಾರು ಮಂದಿಯಿದ್ದರು ಭಯದಿಂದ ಓಡಿ ಹೋದರೆ ಹೊರತು ಯುವತಿಯ ರಕ್ಷಣೆಗೆ ಮಾತ್ರ ಬರಲಿಲ್ಲ.

ಕರುಣಾ ಪೋಷಕರು ಕಳೆದ ಐದು ತಿಂಗಳ ಹಿಂದೆ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು. ಬಳಿಕ ಎರಡು ಕುಟುಂಬಗಳು ರಾಜಿ ಮಾಡಿಕೊಂಡಿದ್ದರಿಂದ ನಾವು ಯಾವುದೇ ಕ್ರಮಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಂದರ್ ಗೆ ಮದುವೆಯಾಗಿದ್ದು ಆತನ ವಿಚ್ಛೇದನ ಪ್ರಕರಣ ಇನ್ನು ವಿಚಾರಣೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT