ಕಾಲ್ಪನಿಕ ಚಿತ್ರ 
ದೇಶ

ಪಾದಚಾರಿಗೆ ಡಿಕ್ಕಿ ಹೊಡೆದು ಕಾರಿನ ಬಾನೆಟ್ ಮೇಲೆ ಶವವನ್ನು 2 ಕಿಮೀ ವರೆಗೆ ಹೊತ್ತೊಯ್ದ ಚಾಲಕ

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಚಾಲಕ ಕಾರು ನಿಲ್ಲಿಸದೇ ಬಾನೆಟ್ ಮೇಲಿದ್ದ ಶವವನ್ನು ಸುಮಾರು ಎರಡೂವರೆ ಕಿ.ಮೀ ದೂರ ಹೊತ್ತೊಯ್ದ ಘಟನೆ ...

ಮೆಹಬೂಬ ನಗರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಚಾಲಕ  ಕಾರು ನಿಲ್ಲಿಸದೇ ಬಾನೆಟ್ ಮೇಲಿದ್ದ ಶವವನ್ನು ಸುಮಾರು ಎರಡೂವರೆ ಕಿ.ಮೀ ದೂರ ಹೊತ್ತೊಯ್ದ ಘಟನೆ ಹೈದರಾಬಾದ್ ನ ಜಡ್ಚೆರ್ಲಾದಲ್ಲಿ ನಡೆದಿದೆ.

ಕರ್ನೂಲ್ ನಿಂದ ಹೈದರಾಬಾದ್ ಗೆ ಬರುತ್ತಿದ್ದ ಕಾರಿನಲ್ಲಿದ್ದ ಅಪರಿಚಿತ ಚಾಲಕ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಬಾನೆಟ್ ಮೇಲಿದ್ದ ಶವವನ್ನು ಇಳಿಸಿದೇ ಸುಮಾರು ಎರಡೂವರೆ ಕಿಮೀ ವರೆಗೂ ಕೊಂಡೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವನನ್ನು ನಿಂಬಾಯಿಗಡ್ಡ ನಿವಾಸಿ ಸ್ರೀನು ಎಂದು ತಿಳಿದು ಬಂದಿದೆ. ಸ್ರೀನು ಸ್ಥಳೀಯ ಕಬ್ಬಿಣದ ಅಂಗಡಿಯೊಂದರಲ್ಲಿ ದಿನಗೂಲಿ ನೌಕರನಾಗಿದ್ದ. ಸ್ರೀನು ಗೆ ಡಿಕ್ಕಿ ಹೊಡೆದ ಕಾರನ್ನು ಸ್ಥಳೀಯ ಯುವಕರು ತಮ್ಮ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾರೆಯ. ಆದರೆ ಅಪಘಾತ ನಡೆದ ಸ್ಥಳದಿಂದ ಸುಮಾರು ಎರಡೂವರೆ ಕಿಮೀ ದೂರದಲ್ಲಿ ಕಾರು ನಿಲ್ಲಿಸಿ ಚಾಲಕ ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಕಾರನ್ನು ಪರಿಶೀಲನೆ ನಡೆಸಿದಾಗ ಅದು ಹೈದರಾಬಾದ್ ನ ನಿವಾಸಿ ಚಂದ್ರಕಲಾ ಎಂಬುವರಿಗೆ ಸೇರಿದ್ದಾಗಿ ತಿಳಿದು ಬಂದಿದೆ. ವಿಳಾಸ ಪಡೆದು ಪೊಲೀಸರು ಚಂದ್ರಕಲಾ ಮನೆಗೆ ಭೇಟಿ ನೀಡಿದ್ದರು. ಆದರೆ ಘಟನೆ ನಂತರ ಚಂದ್ರಕಲಾ ತಮ್ಮ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾರೆ.ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ದೇಹವನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT